Featured

ಉಡುಪಿ : ಅನಾಥ ಹೆಣ್ಣು ಮಕ್ಕಳ ಅದ್ಧೂರಿ ವಿವಾಹ ; ಜಿಲ್ಲಾಧಿಕಾರಿಯಿಂದ ಕನ್ಯಾದಾನ – vishwanews24

ಅನಾಥ ಹೆಣ್ಣು ಮಕ್ಕಳ ಅದ್ಧೂರಿ ವಿವಾಹಕ್ಕೆ ಸಾಕ್ಷಿಯಾಯಿತು ಉಡುಪಿಯ ರಾಜ್ಯ ಮಹಿಳಾ ನಿಲಯ

ಉಡುಪಿ : ಅನಾಥ ಹೆಣ್ಣು ಮಕ್ಕಳ ಅದ್ಧೂರಿ ವಿವಾಹಕ್ಕೆ ಉಡುಪಿಯ ರಾಜ್ಯ ಮಹಿಳಾ ನಿಲಯ ಸಾಕ್ಷಿಯಾಗಿದೆ. ಜಿಲ್ಲಾಡಳಿತ ನೇತೃತ್ವದಲ್ಲಿ ಇಬ್ಬರ ವಿವಾಹ ಕಾರ್ಯಕ್ರಮ ನೆರವೇರಿದ್ದು, ಜಿಲ್ಲಾಧಿಕಾರಿಯೇ ಮುಂದೆ ನಿಂತು ಕನ್ಯಾದಾನ ಮಾಡಿದ್ದು ವಿಶೇಷವಾಗಿತ್ತು. ಆ ಮೂಲಕ ರಾಜ್ಯ ಮಹಿಳಾ ನಿಲಯದಲ್ಲಿ ಈವರೆಗೆ ನೆರವೇರಿದ ಮದುವೆಗಳ ಸಂಖ್ಯೆ 25ರ ಗಡಿ ತಲುಪಿತು.

ಕಿವಿ ಕೇಳಿಸದ, ಮಾತು ಬಾರದ ಅನಾಥ ಯುವತಿಯ ಬಾಳಿಗೆ ಹಾಸನದ ಕೃಷಿಕ ಬೆಳಕಾಗಿ ಬಂದರೆ, ವಿವಾಹವಾದ ಮತ್ತೋರ್ವ ಯುವತಿ ಈಗ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ. ಎಂಕಾಂ ಮಾಡಿ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿರುವ ಯುವಕನ ಜೊತೆ ಈಕೆ ಸಪ್ತಪದಿ ತುಳಿದಿದ್ದು, ಆಕೆಯ ಮುಂದಿನ ಓದಿನ ಜವಾಬ್ದಾರಿಯನ್ನೂ ಆತ ಹೊತ್ತಿದ್ದಾನೆ. ವಿದ್ಯಾಭ್ಯಾಸ ಮಾಡುತ್ತಿರುವ ಹುಡುಗಿಗೆ ಉದ್ಯೋಗಸ್ಥ ಯುವಕನೇ ಬೇಕೆಂದು ಕಾದು ಕುಳಿತು ರಾಜ್ಯ ಮಹಿಳಾ ನಿಲಯ ಮದುವೆ ಮಾಡಿಸಿದೆ. ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರೇ ಮುಂದೆನಿಂತು ಮದುವೆಕಾರ್ಯ ನೆರವೇರಿಸಿದ್ದು, ಕನ್ಯಾದಾನ ಮಾಡಿದ್ದಾರೆ. ನವ ವಿವಾಹಿತರಿಗೆ ಆರತಿಯನ್ನೂ ಬೆಳಗಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಮದುವೆಗೆ ಹಾಜರಾಗಿದ್ದು, ನವ ವಿವಾಹಿತರ ಹೆಸರಿಗೆ 50 ಸಾವಿರ ರೂ. ಹಣ ಡೆಪಾಸಿಟ್ ಕೂಡ ಮಾಡಲಾಗಿದೆ. ಇದು ಸ್ವರ್ಗದಲ್ಲಿ ನಿಶ್ಚಯವಾದ ಮದುವೆ ಎಂದು ನೆರೆದಿದ್ದವರು ಹೇಳಿದ್ದಾರೆ. ಇನ್ನು ಬ್ರಾಹ್ಮಣ ಸಮುದಾಯ ಸೇರಿ ಕೃಷಿಕ ಕುಟುಂಬಗಳ ಯುವಕರಿಗೆ ಮದುವೆಯಾಗಲು ಕನ್ಯೆಯರ ಅಭಾವ ಹಿನ್ನಲೆ ಮದುವೆಗೆ ಕನ್ಯೆಯರಿಗೆ ಆಗ್ರಹಿಸಿ ಉಡುಪಿ ರಾಜ್ಯ ಮಹಿಳಾ ನಿಲಯಕ್ಕೆ ಅತೀ ಹೆಚ್ಚು ಬೇಡಿಕೆ ಬರುತ್ತಿವೆ ಎನ್ನಲಾಗಿದೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

6 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

7 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

7 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

8 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

9 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

9 hours ago