ಉಡುಪಿ: ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆ ನೀಡುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿ ಕೊಂಡಿರುವ ರವಿ ಕಟಪಾಡಿ ಈ ಬಾರಿಯೂ ಅಷ್ಟಮಿಗೆ ವೇಷ ಧರಿಸಲು ಸಿದ್ಧತೆ ನಡೆಸುತ್ತಿದ್ದಾರೆ.
ಈ ಬಗ್ಗೆ ಉಡುಪಿಯಲ್ಲಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರವಿ ಕಟಪಾಡಿ, ಕಳೆದ ಏಳು ವರ್ಷಗಳಿಂದ ವೇಷ ಧರಿಸಿ ಒಟ್ಟು 89.75 ಲಕ್ಷ ರೂ. ಹಣವನ್ನು ಸಾರ್ವಜನಿಕರಿಂದ ಸಂಗ್ರಹಿಸಿದ್ದು, ಈ ಹಣವನ್ನು ಈವರೆಗೆ ಒಟ್ಟು 66 ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗೆ ವಿನಿಯೋಗಿಸಲಾಗಿದೆ. ಈ ಬಾರಿ 10 ಲಕ್ಷ ರೂ. ಹಣ ಸಂಗ್ರಹಿಸುವ ಮೂಲಕ ಒಟ್ಟು ಒಂದು ಕೋಟಿ ರೂ. ಗುರಿ ತಲುಪುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.
ಈ ಬಾರಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆ.19 ಮತ್ತು 20ರಂದು ವೇಷ ಧರಿಸಲಾಗುವುದು. ಹೈದರಬಾದ್, ಮಂಗಳೂರು, ಮಡಿಕೇರಿ, ಕಟಪಾಡಿಯ ಒಟ್ಟು ಏಳು ಮಂದಿ ಕಲಾವಿದರು ವೇಷಕ್ಕಾಗಿ ಕಳೆದ ಒಂದು ತಿಂಗಳುಗಳಿಂದ ಸಿದ್ಧತೆ ನಡೆಸುತ್ತಿದ್ದಾರೆ.
ನಾಳೆಯಿಂದ ವೇಷ ಹಾಕುವ ಪ್ರಕ್ರಿಯೆ ನಡೆಯಲಿದೆ. ವೇಷ ಧರಿಸಿ ಉಡುಪಿ, ಮಲ್ಪೆ, ಕಟಪಾಡಿ, ಉದ್ಯಾವರಗಳಿಗೆ ತೆರಳಿ ಸಾರ್ವ ಜನಿಕರಿಂದ ಹಣ ಸಂಗ್ರಹಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಸಂಗ್ರಹವಾದ ಹಣವನ್ನು ಕಟಪಾಡಿ ಪೇಟೆಬೆಟ್ಟು ಬಬ್ಬುಸ್ವಾಮಿ ದೈವಸ್ಥಾನ ಮತ್ತು ಕೊರಗಜ್ಜ ಸನ್ನಿಧಾನದಲ್ಲಿ ಅನಾರೋಗ್ಯ ಪೀಡಿತ ಕುಂದಾಪುರ, ಕಾರ್ಕಳ, ಮುಲ್ಕಿ, ಹೆಬ್ರಿ, ಕಟಪಾಡಿ, ಕಾಪುವಿನ ಒಟ್ಟು ಆರು ಮಕ್ಕಳ ಚಿಕಿತ್ಸೆಗೆ ನೀಡಲಾ ಗುವುದು.
ನಮ್ಮ ಸೇವೆಗೆ ಧನ ಸಹಾಯ ಮಾಡಲಿಚ್ಛಿಸುವವರು ಪಾಂಗಾಳ ಬ್ಯಾಂಕ್ ಆಫ್ ಬರೋಡ, ಎಸ್ಬಿ ಖಾತೆ ಸಂಖ್ಯೆ: 84350100001040ಗೆ ಜಮಾ ಮಾಡಬಹುದು ಎಂದು ಅವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ರವಿ ಮತ್ತು ಫ್ರೆಂಡ್ಸ್ ಕಟಪಾಡಿ ತಂಡದ ಪ್ರಮುಖರಾದ ಮಹೇಶ್ ಶೆಣೈ, ಅರುಣ್, ಚರಣ್ ಉಪಸ್ಥಿತರಿದ್ದರು.
ರಾಜ್ಯದಾದ್ಯಂತ ಮೀನೂಟ ಮನೆ ಆರಂಭಿಸಲು ನಿರ್ಧರಿಸಿದ ರಾಜ್ಯ ಸರ್ಕಾರ – Vishwanews24
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…