Featured

ಉಡುಪಿ  ಅನೀರಿಕ್ಷಿತ ಮಳೆ: ಕೃತಕ ನೆರೆ ಸೃಷ್ಟಿ, ಮನೆಗಳಿಗೆ ನುಗ್ಗಿದ ನೆರೆ ; ಇನ್ನೂ ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಣೆ – Vishwanews24

ಉಡುಪಿ  ಅನೀರಿಕ್ಷಿತ ಮಳೆ: ಕೃತಕ ನೆರೆ ಸೃಷ್ಟಿ, ಮನೆಗಳಿಗೆ ನುಗ್ಗಿದ ನೆರೆ ; ಇನ್ನೂ ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಣೆ – Vishwanews24

ಉಡುಪಿ: ಮಂಗಳವಾರ ನಗರದಲ್ಲಿ ಸುರಿದ ಅನಿರೀಕ್ಷಿತ ಮಳೆಯಿಂದ ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿತು. ಉಡುಪಿ ನಗರದ ವಿವಿಧೆಡೆ ಕೃತಕ ನೆರೆ ಸೃಷ್ಟಿಯಾಗಿ ಜನರು ಪರದಾಡುವ ಪರಿಸ್ಥಿತಿ ಉಂಟಾಯಿತು.

ರಾತ್ರಿ ಇಡೀ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ನಗರದ ಬೈಲಕೆರೆ, ಮಠದ ಬೆಟ್ಟು, ಕೊಡವೂರು, ಕಲ್ಮಾಡಿ ಪರಿಸರದಲ್ಲಿ ಕೃತಕ ನೆರೆ ಉಂಟಾಗಿದ್ದು ನಗರಾಡಳಿತ ಮಧ್ಯರಾತ್ರಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಿದೆ.

ಮುಂಜಾನೆಯ ವೇಳೆ ಮಳೆ ಕಡಿಮೆಯಾಗಿದ್ದು ನೆರೆ ಇಳಿಮುಖವಾಗುತ್ತಿದೆ. ಬುಧವಾರ ಕೂಡ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್‌ ಘೋಷಣೆಯಾಗಿದ್ದು ಮಧ್ಯಾಹ್ನದ ವೇಳೆಗೆ ಮತ್ತೆ ಮಳೆ ಆರಂಭವಾಗುವ ಸಾಧ್ಯತೆ ಇದೆ.

ಅ.16ರವರೆಗೂ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅನೀರಿಕ್ಷಿತ ಮಳೆಯಿಂದ ತಗ್ಗು ಪ್ರದೇಶದಲ್ಲಿರುವ ತೋಟ, ಗದ್ದೆಗಳಿಗೆ ನೀರು ನುಗಿದ್ದು ರೈತರು ನಷ್ಟ ಅನುಭವಿಸಿದ್ದಾರೆ. ಇನ್ನೊಂದೆಡೆ ಗದ್ದೆಯಲ್ಲಿ ಕಟಾವಿಗೆ ಸಿದ್ಧವಾಗಿರುವ ಭತ್ತ ಪೈರು ಅಡ್ಡ ಬಿದ್ದು, ರೈತರಲ್ಲಿ ಆತಂಕಕ್ಕೂ ಕಾರಣವಾಗಿದೆ.

ಬಂಗಾಳ ಕೊಲ್ಲಿಯ ಉತ್ತರ ಅಂಡಮಾನ್ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯೂ ಇದ್ದು, ಇವೆಲ್ಲ ಮಳೆಗೆ ಪೂರಕ ವಾತಾರಣವಾಗಿ ಪರಿಣಮಿಸಿದೆ. ಅ.16ರವರೆಗೂ ಗುಡುಗು ಸಹಿತ ಮಳೆಯಾಗಲಿದೆ. ಇನ್ನೂ ನಾಲ್ಕು ದಿನ ಯೆಲ್ಲೋ ಅಲರ್ಟ್ ಮುಂದುವರಿದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

12 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago