Featured

ಉಡುಪಿ: ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ 11 ಮಂದಿ PFI ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲು – Vishwanews24

ಉಡುಪಿ: ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ 11 ಮಂದಿ ಪಿಎಫ್ ಐ ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲು

ಉಡುಪಿ: ಪೊಲೀಸರ ಸೂಕ್ತ ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಆರೋಪದಡಿಯಲ್ಲಿ 11 ಪಿಎಫ್ ಐ ಕಾರ್ಯಕರ್ತರ ವಿರುದ್ದ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾದೀಕ್‌ ಅಹಮ್ಮದ್‌(40), ಅಫ್ರೋಜ್‌ಕೆ (39), ಇಲಿಯಾಸ್‌ ಸಾಹೇಬ್‌(46), ಇರ್ಷಾದ್‌(37), ಫಯಾಜ್‌ ಅಹಮ್ಮದ್‌(39), ಮಹಮ್ಮದ್‌ ಅಶ್ರಫ್‌(43), ಎ. ಹಾರೂನ್‌ ರಶೀದ್‌, ಮೊಹಮ್ಮದ್‌ ಜುರೈಜ್‌ (42), ಇಶಾಕ್‌ ಕಿದ್ವಾಯಿ (30), ಶೌಕತ್‌ಅಲಿ (31), ಮಹಮ್ಮದ್‌ ಝಹೀದ್‌(24) ಇವರುಗಳನ್ನು ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ : ಅನವಶ್ಯಕ ಚರ್ಚೆ ಬೇಡ, ಸಹನೆಯನ್ನು ಕಾಪಾಡಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಸಪ್ಟೆಂಬರ್ 22ರಂದು ಪ್ರಮೋದ್ ಕುಮಾರ್ ಪಿ, ಪೊಲೀಸ್ ನಿರೀಕ್ಷಕರು, ಉಡುಪಿ ನಗರ ಪೊಲೀಸ್‌ ಠಾಣೆ ಇವರು ಠಾಣೆಯಲ್ಲಿರುವಾಗ ಉಡುಪಿಯ ಡಯಾನಾ ಸರ್ಕಲ್ ಬಳಿ ಪಿ.ಎಫ್.ಐ ಕಾರ್ಯಕರ್ತರು ಯಾವುದೇ ಪರವಾನಿಗೆ ಇಲ್ಲದೇ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ, ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯುಂಟು ಮಾಡುತ್ತಿರುವ ಕುರಿತು ಮಾಹಿತಿ ದೊರೆತಿದ್ದು ಸ್ಥಳಕ್ಕೆ ತೆರಳಿದ್ದು ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ಸಂಘಟನೆಗಳ ಕಚೇರಿ ಹಾಗೂ ಮನೆಗಳ ಮೇಲೆ ನಡೆದ ದಾಳಿಯನ್ನು ಖಂಡಿಸಿ ಪ್ರತಿಭಟನೆ ನೆಡಸುತ್ತಿರುವುದು ಕಂಡುಬಂದಿದ್ದು, ಪ್ರತಿಭಟನೆಗೆ ಯಾವುದೇ ಪರವಾನಿಗೆ ಇಲ್ಲದ ಕಾರಣ ಪ್ರತಿಭಟನಾಕಾರರನ್ನು ಸ್ಥಳದಿಂದ ಹೋಗಲು ಸೂಚನೆ ನೀಡಿದರೂ ತೆರಳದೆ ಇದ್ದ ವೇಳೆ 11 ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.

ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಮುಂದಿನ ವಿಚಾರಣೆ ನಡೆಯುತ್ತಿದೆ.

ಕಾರ್ಕಳ : 14ನೇ ಶತಮಾನಕ್ಕೆ ಸೇರಿದ ಶಾಸನ ಪತ್ತೆ – Vishwanews24

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago