Featured

ಉಡುಪಿ : ಅನುಷ್ಠಾನ ಸಮಿತಿಗೆ ಸದಸ್ಯರ ಆಯ್ಕೆ : ಪ.ಜಾತಿ / ಪಂಗಡದವರಿಂದ ಅರ್ಜಿ ಆಹ್ವಾನ -Vishwanews24

ಉಡುಪಿ : ಅನುಷ್ಠಾನ ಸಮಿತಿಗೆ ಸದಸ್ಯರ ಆಯ್ಕೆ : ಪ.ಜಾತಿ / ಪಂಗಡದವರಿಂದ ಅರ್ಜಿ ಆಹ್ವಾನ -Vishwanews24

ಉಡುಪಿ : ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿ/ ಪಂಗಡದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸುವ ಕುರಿತು ಸರ್ಕಾರದಿಂದ ಜಾರಿಗೊಳ್ಳುವ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸುವ ಜಿಲ್ಲಾ ಮಟ್ಟದ ಅನುಷ್ಟಾನ ಸಮಿತಿಯ 3 ನಾಮ ನಿರ್ದೇಶಿತ ಸದಸ್ಯರ ಅವಧಿ ಮುಗಿದಿದ್ದು, ಹೊಸ ಸದಸ್ಯರನ್ನು ಆಯ್ಕೆ ಮಾಡಲು ಪರಿಶಿಷ್ಟ ಜಾತಿಗೆ ಸೇರಿದ ದಕ್ಕಲ್/ದಕ್ಕಲ ದಕ್ಕಲಿಗ, ಬುಡ್ಗಜಂಗಮ್, ಹಂದಿಜೋಗಿ, ಶಿಳ್ಳೆಕ್ಯಾತ, ಸುಡುಗಾಡುಸಿದ್ಧ, ಚೆನ್ನದಾಸರ್/ಹೊಲೆಯದಾಸರ್, ಗೋಸಂಗಿ, ಮಾಂಗ್‍ಗಾರುಡಿ, ಗಂಟಿಚೋರ್, ದೊಂಬರ, ಮಾಲದಾಸರಿ, ಹೊಲೆಯದಾಸರಿ, ಮಾಲಸನ್ಯಾಸಿ, ಜಗ್ಗಲಿ, ಸಿಂಧೋಳ್ಳು, ಬಕುಡ, ಬಂಡಿ, ಆಸಾದಿ, ಮಾಸ್ತಿ, ಪಂಬದ, ಮುಕ್ರಿ, ಭಂಗಿ, ತೋಟಿ, ಆದಿಯ, ಅಜಿಲ, ಭೈರ, ಬತಾಡ, ಬೆಳ್ಳಾರ, ಗೊಡ್ಡ, ಹಲ್ಲೀರ್, ವಲ್ಹಾರ್, ಜಾಂಬುವುಲು, ಕಲ್ಲಾಡಿ, ಕೂಸ, ಕೋಟೆಗಾರಮೆಟ್ರಿ, ಮೈಲ, ಮೆಂಗಾವರ್, ನಾಡಿಯಾ, ನಲಕದಾಯ, ನಾಯಡಿ, ಬಿಂಡ್ಲ, ಬೈಗಾರ, ಚಕ್ಕಲಿಯನ್, ಪಾಲೆ, ಪರವನ್, ಅರುಂದತಿಯಾರ್, ಮದರಿ, ಜಾಂಬುವುಲು, ಕಲ್ಲಡಿ, ಕೂಸ, ಅಗೆರ್, ಮಚಲ, ಕೊರಮ/ಕೊರವ, ಕೊರವರ್‍ಕೊರಚ (ಕೊರಚರ್) ಹಾಗೂ ಪರಿಶಿಷ್ಟ ಪಂಗಡದ ಚೆಂಚು ಚೆಂಚುವಾರ್, ಗೌಡಲು, ಹಕ್ಕಿಪಿಕ್ಕಿ, ಪಾರ್ದಿ, ಅಡವಿನ್, ಚಿಂಚಲ್, ಪಾನ್ಸಿಪಾರ್ದಿ, ಹರಣಶಿಕಾರಿ, ಹಸಲರು, ಇರುಳಿಗ, ಕತೋಡಿ, ಕಟ್ಕರಿ, ಧೋರ್‍ಕತೋಡಿ, ಧೋರ್‍ಕಟ್ಕರಿ, ಸನ್‍ಕಟ್ಕರಿ, ಕುಡಿಯ, ಪಣಿಯನ್, ರಾಜಗೊಂಡ, ಗೊಂಡ, ನಾಯಕ್‍ಪಾಡ್, ದುಬಲ, ತಾಳವ್ಯ, ಹಳಪಟ್ಟಿ, ಗಮಟ, ಗಮಟಿ, ಮಾನಚೈ, ಪಡವಿ, ವಲವೈ, ಇರುಳರ್, ಕಮ್ಮಾರ, ಕೊಂಡಕಾಪಾಸ್, ಕೊಯ, ಬಿನೆಕೋಯ, ಕುರುಬ, ಮೇದ, ಮೇದರಿ, ಗೌರಿಗ, ಬುರುಗ, ಯರವ, ಬೌಚ, ಬಂಚ, ಬಿಲ್, ಬಿಲ್‍ಗರಾಸಿಯಾ, ದೋಲಿಬಿಲ್, ಡುಂಗ್ರಿಬಿಲ್, ಡುಂಗ್ರಿಗರಾಸಿಯಾ, ರಾವಲ್‍ಬಿಲ್, ತಡವಿಬಿಲ್, ಭಾಗಲಿಯ, ಬಿಲಾಲ, ಪರ್ವ ವಸವ, ವಸವೆ, ಅಡಿಯನ್, ಬರಡ ಉಪಜಾತಿಗಳಿಗೆ ಸೇರಿರುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ರಜತಾದ್ರಿ ಮಣಿಪಾಲ ಕಚೇರಿಯನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago