ಉಡುಪಿ : ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪ ಮಂಗಳ ಮುಖಿಯರನ್ನು ಅನೈತಿಕ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಕುರಿತ ದೂರಿನ ಹಿನ್ನೆಲೆಯಲ್ಲಿ ಡಿ.15ರಂದು ತಡರಾತ್ರಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚಿಂದ್ರ ಸ್ವತಃ ತಾವೇ ಕಾರ್ಯಾಚರಣೆ ನಡೆಸಿದ್ದಾರೆ.
ಈ ವೇಳೆ ಇಬ್ಬರು ಪಿಂಪ್ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ನಗರದ ಸಿಟಿ ಬಸ್ ನಿಲ್ದಾಣ ಹಾಗೂ ಸರ್ವಿಸ್ ನಿಲ್ದಾಣದ ಸಮೀಪ ಅನೈತಿಕ ದಂಧೆಯಲ್ಲಿ ತೊಡಗಿಸಿಕೊಂಡಿರುವ ಕೆಲವು ಮಂಗಳಮುಖಿಯರು, ವಾಹನ ಗಳನ್ನು ಅಡ್ಡ ಹಾಕಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಾರೆ, ದಾರಿದೀಪವನ್ನು ಒಡೆದು ಹಾಕಿದ್ದಾರೆ ಮತ್ತು ಜನರಿಂದ ಹಣ ವಸೂಲಿ ಮಾಡುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಎಸ್ಪಿ ಈ ಕಾರ್ಯಾಚರಣೆಗೆ ಇಳಿದಿದ್ದರು. ಸ್ವತಃ ಎಸ್ಪಿಯವರೇ ಸ್ಥಳಕ್ಕೆ ಆಗಮಿಸಿ ಮಂಗಳಮುಖಿಯನ್ನು ಅಲ್ಲಿಂದ ತೆರವುಗೊಳಿಸಲು ಮುಂದಾದರು.
ಎಸ್ಪಿ ಎಂಬುದನ್ನು ತಿಳಿಯದ ಕೆಲವು ಮಂಗಳ ಮುಖಿಯರು ಎಸ್ಪಿ ಜೊತೆ ವಾಗ್ವಾದಕ್ಕೆ ಇಳಿದು ಅವಾಚ್ಯ ಶಬ್ದಗಳಿಂದ ಬೈದರೆನ್ನಲಾಗಿದೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಎಲ್ಲರನ್ನು ಚದುಸಿದರು.
ಈ ವೇಳೆ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇದೇ ವೇಳೆ ಗ್ರಾಹಕರನ್ನು ರಿಕ್ಷಾದಲ್ಲಿ ಕರೆ ತಂದು ಅನೈತಿಕ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದ ಇಬ್ಬರು ಪಿಂಪ್ಗಳನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ. ಅವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…