Featured

ಉಡುಪಿ : ಅನೈತಿಕ ದಂಧೆ ತಡೆಯಲು ಕಾರ್ಯಾಚರಣೆಗೆ ಇಳಿದ ಎಸ್ಪಿ: ಮಂಗಳಮುಖಿಯರೊಂದಿಗೆ ವಾಗ್ವಾದ ; ಇಬ್ಬರು ಪಿಂಪ್‌ಗಳ ಬಂಧನ – Vishwanews24

ಉಡುಪಿ : ಅನೈತಿಕ ದಂಧೆ ತಡೆಯಲು ಕಾರ್ಯಾಚರಣೆಗೆ ಇಳಿದ ಎಸ್ಪಿ ಅಕ್ಷಯ್ ಹಾಕೇ ಮಚ್ಚಿಂದ್ರ

ಮಂಗಳಮುಖಿಯರೊಂದಿಗೆ ವಾಗ್ವಾದ ,ಇಬ್ಬರು ಪಿಂಪ್‌ಗಳ ಬಂಧನ

ಉಡುಪಿ : ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪ ಮಂಗಳ ಮುಖಿಯರನ್ನು ಅನೈತಿಕ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಕುರಿತ ದೂರಿನ ಹಿನ್ನೆಲೆಯಲ್ಲಿ ಡಿ.15ರಂದು ತಡರಾತ್ರಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚಿಂದ್ರ ಸ್ವತಃ ತಾವೇ ಕಾರ್ಯಾಚರಣೆ ನಡೆಸಿದ್ದಾರೆ.

ಈ ವೇಳೆ ಇಬ್ಬರು ಪಿಂಪ್‌ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ನಗರದ ಸಿಟಿ ಬಸ್ ನಿಲ್ದಾಣ ಹಾಗೂ ಸರ್ವಿಸ್ ನಿಲ್ದಾಣದ ಸಮೀಪ ಅನೈತಿಕ ದಂಧೆಯಲ್ಲಿ ತೊಡಗಿಸಿಕೊಂಡಿರುವ ಕೆಲವು ಮಂಗಳಮುಖಿಯರು, ವಾಹನ ಗಳನ್ನು ಅಡ್ಡ ಹಾಕಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಾರೆ, ದಾರಿದೀಪವನ್ನು ಒಡೆದು ಹಾಕಿದ್ದಾರೆ ಮತ್ತು ಜನರಿಂದ ಹಣ ವಸೂಲಿ ಮಾಡುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಎಸ್ಪಿ ಈ ಕಾರ್ಯಾಚರಣೆಗೆ ಇಳಿದಿದ್ದರು. ಸ್ವತಃ ಎಸ್ಪಿಯವರೇ ಸ್ಥಳಕ್ಕೆ ಆಗಮಿಸಿ ಮಂಗಳಮುಖಿಯನ್ನು ಅಲ್ಲಿಂದ ತೆರವುಗೊಳಿಸಲು ಮುಂದಾದರು.

ಎಸ್ಪಿ ಎಂಬುದನ್ನು ತಿಳಿಯದ ಕೆಲವು ಮಂಗಳ ಮುಖಿಯರು ಎಸ್ಪಿ ಜೊತೆ ವಾಗ್ವಾದಕ್ಕೆ ಇಳಿದು ಅವಾಚ್ಯ ಶಬ್ದಗಳಿಂದ ಬೈದರೆನ್ನಲಾಗಿದೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಎಲ್ಲರನ್ನು ಚದುಸಿದರು.

ಈ ವೇಳೆ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇದೇ ವೇಳೆ ಗ್ರಾಹಕರನ್ನು ರಿಕ್ಷಾದಲ್ಲಿ ಕರೆ ತಂದು ಅನೈತಿಕ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದ ಇಬ್ಬರು ಪಿಂಪ್‌ಗಳನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ. ಅವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago