ಉಡುಪಿ: ಹಿರಿಯಡ್ಕದ ಬೊಮ್ಮರಬೆಟ್ಟು ಗ್ರಾಮದ ಮಾಂಬೆಟ್ಟು ಎಂಬಲ್ಲಿ ಸರಕಾರದ ಉಚಿತ ಅನ್ನ ಭಾಗ್ಯ ಯೋಜನೆಯ ಅಕ್ಕಿಯನ್ನು ಸಾರ್ವಜನಿಕರಿಂದ ಖರೀದಿಸಿ ದಾಸ್ತಾನು ಇಟ್ಟಿರುವ ಆರೋಪದಲ್ಲಿ ಓರ್ವನನ್ನು ಹಿರಿಯಡ್ಕ ಪೊಲೀಸರು ಜೂನ್ 10ರಂದು ಬಂಧಿಸಿದ್ದಾರೆ.
ವಾಸುದೇವ ಪ್ರಭು(56) ಬಂದಿತ ಆರೋಪಿ. ಈತನಿಗೆ ಸೇರಿದ ಪ್ರಭು ಜನರಲ್ ಸ್ಟೋರ್ ನಲ್ಲಿ ಸರಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಸಾರ್ವಜನಿಕರಿಂದ ಖರೀದಿಸಿ ದಾಸ್ತಾನು ಇಟ್ಟಿದ್ದೆನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿಯಂತೆ ಆಹಾರ ನಿರೀಕ್ಷಕರು ಮತ್ತು ಹಿರಿಯಡ್ಕ ಪೊಲೀಸರು ದಾಳಿ ಮಾಡಿ, ಒಟ್ಟು 131 ಪ್ಲಾಸ್ಟಿಕ್ ಚೀಲಗಳಲ್ಲಿದ್ದ 1,27,880 ರೂ. ಮೌಲ್ಯದ ಒಟ್ಟು 55.60 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಬಂಧಿಸಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…