ಉಡುಪಿ

ಉಡುಪಿ: ಅಪರಿಚಿತ ವ್ಯಕ್ತಿ ಡಾಕ್ಟರ್ ಎಂಬುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ – Vishwanews24

ಉಡುಪಿ: ಅಪರಿಚಿತ ವ್ಯಕ್ತಿ ಡಾಕ್ಟರ್ ಎಂಬುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

ಉಡುಪಿ :‌ ಅಪರಿಚಿತ ವ್ಯಕ್ತಿಯೊಬ್ಬ ತಾನು ಡಾಕ್ಟರ್ ಎಂಬುದಾಗಿ ನಂಬಿಸಿ ಮಹಿಳೆ ಒಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ಬೆಳಕೆಗೆ ಬಂದಿದೆ.

ಉಡುಪಿಯ ಮಲ್ಲೆ ಮೂಲದ ವಿನಿತಾ ಎಂಬವರು ಕಂಪೆನಿಯಲ್ಲಿ ಬಿಸಿನೆಟಸ್ ಪಾರ್ಟ್ನರ್ ಆಗಿ ಕೆಲಸ ಮಾಡಿಕೊಂಡಿದ್ದು, ಬಿಸಿನೆಸ್ ಮುಂದುವರೆಸುವ ಬಗ್ಗೆ ಇಂಟರ್ನೆಟ್ ಕನೆಕ್ಷನ್ ಮಾಡಿಕೊಂಡಿರುವುದಾಗಿದೆ. 2024 ರ ಜನವರಿಯ 24 ರಂದು ಅಪರಿಚಿತ ವ್ಯಕ್ತಿಯೊಬ್ಬ ತಾನು ಡಾಕ್ಟರ್ ಎಂಬುದಾಗಿ ಪರಿಚಯ ಮಾಡಿಕೊಂಡು ವಾಟ್ಸ್ಯಾಪ್ ಮೂಲಕ ಚಾಟ್ ಮಾಡಿಕೊಂಡಿತ್ತಾನೆ. ನಂತರ ಆತನು ಲಂಡನ್ನಿಂದ ಭಾರತಕ್ಕೆ ಬರುವುದಾಗಿ ಹೇಳಿದ್ದು, ಫೆಬ್ರವರಿ 02ರಂದು ಬೆಳಿಗ್ಗೆ 10:30 ಗಂಟೆಗೆ ವಿನಿತಾ ರವರಿಗೆ ಬೇರೆಯೊಂದು ನಂಬರಿನಿಂದ ಕರೆ ಬಂದಿದ್ದು, ಅವರ ಸ್ನೇಹಿತ ದಿಲ್ಲಿ ಏರ್ಪೋರ್ಟ್ ಅಥಾರಿಟಿಯಿಂದ ಕರೆ ಮಾಡುತ್ತಿದ್ದು, ನಿಮ್ಮ ಫ್ರೆಂಡ್ ನಮ್ಮ ಕಸ್ಟಡಿಯಲ್ಲಿದ್ದು ಇವರನ್ನು ರೆಸ್ಕ್ಯೂ/ರಿಲೀವ್ ಮಾಡಬೇಕಾದರೆ ಪೆನಾಲ್ಟಿ ಕಟ್ಟಬೇಕಾಗಿ ಹೇಳಿದ್ದು, ಭಾರತ ಸರ್ಕಾರದಿಂದ ತಮ್ಮ ಮೇಲೆ ಲೀಗಲ್ ಪ್ರೊಸೀಜರ್ ಆಗಬಹುದೆಂದು ಹೆದರಿ ಹಣವನ್ನು ಕಟ್ಟಿ ಮುಚ್ಚಲು ಹಣ ಪಾವತಿ ಮಾಡಿರುವುದಾಗಿದೆ. ವಿನಿತಾ ರವರು ಫೆಬ್ರವರಿ 16ರಿಂದ ಫೆಬ್ರವರಿ 20 ರವರೆಗೆ ಒಟ್ಟು 4,96,000/- ರೂಪಾಯಿ ಹಣವನ್ನು ಕೆನರಾ ಬ್ಯಾಂಕ್ ಖಾತೆಯ ಮೂಲಕ ಹಾಗೂ ಪೋನ್ಪೇ ಮೂಲಕ ವರ್ಗಾಯಿಸಿರುವುದಾಗಿದೆ.

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

38 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

50 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

1 hour ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago