ಉಡುಪಿ : ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ಅಪಾರ್ಟ್ಮೆಂಟ್ನಲ್ಲಿ ಗಾಂಜಾ ಶೇಖರಣೆ ಮಾಡಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಉಡುಪಿ ಮಣಿಪಾಲದ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.
ಗುಜರಾತ್ ಮೂಲದ ಕುಶ್ ಕೆ ಯುಶ್ ಪಟೇಲ್ (20) ಹಾಗೂ ಉತ್ತರ ಪ್ರದೇಶ ಮೂಲದ ದೇವಾಂಶ್ ತ್ಯಾಗಿ (22) ಬಂಧಿತ ಆರೋಪಿಗಳು.
ಆರೋಪಿಗಳು ಗಾಂಜಾವನ್ನು ಮಣಿಪಾಲದಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಲಾಭ ಗಳಿಸುವ ಉದ್ದೇಶದಿಂದ ಅಪಾರ್ಟ್ಮೆಂಟ್ ಕೊಠಡಿಯಲ್ಲಿ ಶೇಖರಿಸಿ ಇಟ್ಟಿರುವುದು ತನಿಖೆಯಿಂದ ಕಂಡುಬಂದಿದೆ.
ಮಾಹಿತಿ ಆಧಾರಿಸಿ ಮಣಿಪಾಲದ ಎರಡು ಅಪಾರ್ಟ್ಮೆಂಟ್ ಗೆ ದಾಳಿ ನಡೆಸಿದ ಪೊಲೀಸರು ಈ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದು, ಬಂಧಿತರಿಂದ 36 ಸಾವಿರ ಮೌಲ್ಯದ 727 ಗ್ರಾಂ ಗಾಂಜಾ ಹಾಗೂ 30 ಸಾವಿರ ರೂ. ಮೌಲ್ಯದ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…