Featured

ಉಡುಪಿ: ಅಪ್ರಾಪ್ತ ಬಾಲಕಿಗೆ ಪ್ರೀತಿಸಿ ಮೋಸ ಮಾಡಿದ ಪ್ರಕರಣ: ಆರೋಪಿಗೆ 20 ವರ್ಷ ಜೈಲು – vishwanews24

ಉಡುಪಿ: ಅಪ್ರಾಪ್ತ ಬಾಲಕಿಗೆ ಪ್ರೀತಿಸಿ ಮೋಸ ಮಾಡಿದ ಪ್ರಕರಣ: ಆರೋಪಿಗೆ 20 ವರ್ಷ ಜೈಲು

ಉಡುಪಿ : ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸ್‌ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಮಂಗಳವಾರ ಆದೇಶ ನೀಡಿದೆ.

ಕುಂದಾಪುರದ ನಿವಾಸಿ ಮಿಥುನ್(21) ಶಿಕ್ಷೆಗೆ ಗುರಿಯಾದ ಆರೋಪಿ. ಈತ 17ವರ್ಷ ಪ್ರಾಯದ ನೊಂದ ಬಾಲಕಿಯನ್ನು ಕಾಲೇಜಿಗೆ ತೆರಳುವ ವೇಳೆ ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ, ಪುಸಲಾಯಿಸಿದ್ದು, 2023ರ ಜನವರಿಯಿಂದ ಆಕೆಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದನು. ನಂತರ ಬಾಲಕಿಯ ಆರೋಗ್ಯದಲ್ಲಿ ಆದ ವ್ಯತ್ಯಾಸವನ್ನು ಗಮನಿಸಿದ ಪೋಷಕರು, ವೈದ್ಯಕೀಯ ಪರೀಕ್ಷೆ ನಡೆಸಿದರು. ಇದರಿಂದ ಆಕೆ ಗರ್ಭಿಣಿ ಎಂಬುದು ತಿಳಿದು, ಪ್ರಕರಣ ಬೆಳಕಿಗೆ ಬಂತು. ಸಂತ್ರಸ್ತ ಬಾಲಕಿಯ ತಂದೆ ನೀಡಿದ ದೂರಿನಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕ ನಂದ ಕುಮಾರ್, ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

ಈ ಬಗ್ಗೆ ನ್ಯಾಯಾಧೀಶ ಶ್ರೀನಿವಾಸ ಸುವರ್ಣ, ಅಭಿಯೋಜನೆ ಪರ ಒಟ್ಟು ಸಲ್ಲಿಸಲಾದ 30ಸಾಕ್ಷಿಗಳ ಪೈಕಿ 16 ಸಾಕ್ಷಿಗಳ ವಿಚಾರಣೆಯನ್ನು, ವಾದ ಹಾಗೂ ಪ್ರತಿವಾದಗಳನ್ನು ಮತ್ತು ಡಿಎನ್ಎ ಸಾಕ್ಷಿಯನ್ನು ಪರಿಗಣಿಸಿ, ಆರೋಪಿ ದೋಷಿ ಎಂಬುದಾಗಿ ಅಭಿಪ್ರಾಯ ಪಟ್ಟರು. ಅದರಂತೆ ಆರೋಪಿಗೆ ಒಟ್ಟು 20 ವರ್ಷಗಳ ಜೈಲು ಶಿಕ್ಷೆ ಮತ್ತು 21ಸಾವಿರ ರೂ. ದಂಡ ವಿಧಿಸಿದರು. ದಂಡದ ಮೊತ್ತದಲ್ಲಿ 15ಸಾವಿರ ರೂ. ಬಾಲಕಿಗೆ, 6ಸಾವಿರ ರೂ. ಸರಕಾರಕ್ಕೆ ನೀಡುವಂತೆ ಮತ್ತು ನೊಂದ ಬಾಲಕಿಗೆ ಸರಕಾರದಿಂದ 2ಲಕ್ಷ ರೂ. ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಿದರು. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದ ಮಂಡಿಸಿದ್ದರು.

Vishwa News 24

Recent Posts

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

15 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

24 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

39 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

54 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

3 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago