Judge and gavel in courtroom
ಉಡುಪಿ : ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸ್ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಮಂಗಳವಾರ ಆದೇಶ ನೀಡಿದೆ.
ಕುಂದಾಪುರದ ನಿವಾಸಿ ಮಿಥುನ್(21) ಶಿಕ್ಷೆಗೆ ಗುರಿಯಾದ ಆರೋಪಿ. ಈತ 17ವರ್ಷ ಪ್ರಾಯದ ನೊಂದ ಬಾಲಕಿಯನ್ನು ಕಾಲೇಜಿಗೆ ತೆರಳುವ ವೇಳೆ ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ, ಪುಸಲಾಯಿಸಿದ್ದು, 2023ರ ಜನವರಿಯಿಂದ ಆಕೆಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದನು. ನಂತರ ಬಾಲಕಿಯ ಆರೋಗ್ಯದಲ್ಲಿ ಆದ ವ್ಯತ್ಯಾಸವನ್ನು ಗಮನಿಸಿದ ಪೋಷಕರು, ವೈದ್ಯಕೀಯ ಪರೀಕ್ಷೆ ನಡೆಸಿದರು. ಇದರಿಂದ ಆಕೆ ಗರ್ಭಿಣಿ ಎಂಬುದು ತಿಳಿದು, ಪ್ರಕರಣ ಬೆಳಕಿಗೆ ಬಂತು. ಸಂತ್ರಸ್ತ ಬಾಲಕಿಯ ತಂದೆ ನೀಡಿದ ದೂರಿನಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕ ನಂದ ಕುಮಾರ್, ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.
ಈ ಬಗ್ಗೆ ನ್ಯಾಯಾಧೀಶ ಶ್ರೀನಿವಾಸ ಸುವರ್ಣ, ಅಭಿಯೋಜನೆ ಪರ ಒಟ್ಟು ಸಲ್ಲಿಸಲಾದ 30ಸಾಕ್ಷಿಗಳ ಪೈಕಿ 16 ಸಾಕ್ಷಿಗಳ ವಿಚಾರಣೆಯನ್ನು, ವಾದ ಹಾಗೂ ಪ್ರತಿವಾದಗಳನ್ನು ಮತ್ತು ಡಿಎನ್ಎ ಸಾಕ್ಷಿಯನ್ನು ಪರಿಗಣಿಸಿ, ಆರೋಪಿ ದೋಷಿ ಎಂಬುದಾಗಿ ಅಭಿಪ್ರಾಯ ಪಟ್ಟರು. ಅದರಂತೆ ಆರೋಪಿಗೆ ಒಟ್ಟು 20 ವರ್ಷಗಳ ಜೈಲು ಶಿಕ್ಷೆ ಮತ್ತು 21ಸಾವಿರ ರೂ. ದಂಡ ವಿಧಿಸಿದರು. ದಂಡದ ಮೊತ್ತದಲ್ಲಿ 15ಸಾವಿರ ರೂ. ಬಾಲಕಿಗೆ, 6ಸಾವಿರ ರೂ. ಸರಕಾರಕ್ಕೆ ನೀಡುವಂತೆ ಮತ್ತು ನೊಂದ ಬಾಲಕಿಗೆ ಸರಕಾರದಿಂದ 2ಲಕ್ಷ ರೂ. ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಿದರು. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದ ಮಂಡಿಸಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…