Featured

ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ :  ಅಪರಾಧಿಗೆ ಆಜೀವ ಕಾರಾಗೃಹ ಶಿಕ್ಷೆ ಹಾಗೂ ದಂಡ – Vishwanews24

ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ :  ಅಪರಾಧಿಗೆ ಆಜೀವ ಕಾರಾಗೃಹ ಶಿಕ್ಷೆ ಹಾಗೂ ದಂಡ

ಉಡುಪಿ: ಬಾಲಕಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಸಾಬೀತಾಗಿದ್ದು ಹೀಗಾಗಿ ಅಪರಾಧಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರು ಅಜೀವ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ರಾಜೀಬ್ ಅಲಿಯಾಸ್ ಚೋಟು (20) ಶಿಕ್ಷೆಗೆ ಗುರಿಯಾದ ಆರೋಪಿ.

2018ರ ಪೆಬ್ರವರಿ ತಿಂಗಳಿನಲ್ಲಿ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ರಸ್ತೆ ಕೆಲಸಕ್ಕೆ ಬಂದಿದ್ದ ರಾಜೀಬ್ 14 ವರ್ಷದ ಪ್ರಾಯದ ಬಾಲಕಿಯನ್ನು ಮನೆಯಿಂದ ಅಪಹರಿಸಿದ್ದನು. ಮಗಳು ಕಾಣೆಯಾದ ಬಗ್ಗೆ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಅಪ್ರಾಪ್ತೆಯನ್ನು ರೈಲು ನಿಲ್ದಾಣವೊಂದರಲ್ಲಿ ಪತ್ತೆ ಮಾಡಿ ಪೊಲೀಸರು ಕರೆ ತಂದಿದ್ದರು. ಆಪ್ತ ಸಮಾಲೋಚನೆ ವೇಳೆ ಬಾಲಕಿಯು ರಾಜೀಬ್ ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಗ್ಗೆ ಹಾಗೂ ಇತರ ಐವರ ವಿರುದ್ಧ ಮಾಹಿತಿ ನೀಡಿದ ಆಧಾರದಲ್ಲಿ ಎಲ್ಲರನ್ನು ಬಂಧಿಸಲಾಗಿತ್ತು.

ಮೊದಲಿಗೆ ಅಂದಿನ ಉಡುಪಿ ಡಿವೈಎಸ್ಪಿ ಕುಮಾರಸ್ವಾಮಿ ಭಾಗಶಃ ತನಿಖೆ ನಡೆಸಿದ್ದು ತರುವಾಯ ಅಂದಿನ ಡಿವೈಎಸ್ಪಿ ಟಿ.ಆರ್ ಜೈಶಂಕರ್ ದೋಷಾರೋಪಣಾ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. 46 ಸಾಕ್ಷಿಗಳ ಪೈಕಿ ನ್ಯಾಯಾಲಯದಲ್ಲಿ 28 ಸಾಕ್ಷಿಗಳ ವಿಚಾರಣೆ ನಡೆದಿದ್ದು, ಸಂತ್ರಸ್ತ ಬಾಲಕಿ ನುಡಿದ ಸಾಕ್ಷ್ಯ ಹಾಗೂ ಆಕೆ ಸಹೋದರ, ಸಹೋದರಿ ಸಾಕ್ಷಿಗಳು, ಸಾಂದರ್ಭಿಕ ಸಾಕ್ಷಿಗಳ ಹೇಳಿಕೆಯಿಂದ ರಾಜೀಬ್ ಮೇಲಿನ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯ ಪಟ್ಟ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದರು. ಉಳಿದ ಐವರು ಆರೋಪಗಳನ್ನು ಖುಲಾಸೆಗೊಳಿಸಲಾಯಿತು.

ಪರಿಶಿಷ್ಟ ಜಾತಿಯ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಕ್ಕೆ ರಾಜೀಬ್ ಗೆ ಅಜೀವ ಕಾರಾಗೃಹ ಶಿಕ್ಷೆ ಸಹಿತ, ಅಪಹರಣ, ಅತ್ಯಾಚಾರ ಮೊದಲಾದ ಪ್ರಕರಣದಲ್ಲಿ ಜೈಲು ಶಿಕ್ಷೆ ವಿಧಿಸಿದ್ದು 56 ಸಾವಿರ ದಂಡ ವಿಧಿಸಲಾಗಿದೆ. ಈ ದಂಡದಲ್ಲಿ 16 ಸಾವಿರ ರೂ. ಸರ್ಕಾರಕ್ಕೆ ಹಾಗೂ 40 ಸಾವಿರ ನೊಂದ ಬಾಲಕಿಗೆ ನೀಡಲು ಆದೇಶಿಸಿದ್ದಲ್ಲದೆ ಸಂತ್ರಸ್ತೆಗೆ 5 ಲಕ್ಷ ಪರಿಹಾರವನ್ನು ಸರ್ಕಾರ ನೀಡುವಂತೆ ನ್ಯಾಯಾಲಯ ತೀರ್ಪುನಲ್ಲಿ ತಿಳಿಸಿದೆ.

ಉಡುಪಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಪ್ರಾಸಿಕ್ಯೂಶನ್ ಪರವಾಗಿ ವಾದ ಮಂಡಿಸಿದ್ದರು.

Vishwa News 24

Recent Posts

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು -vishwanews24

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…

9 hours ago

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

11 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

14 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

14 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

14 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

15 hours ago