ಉಡುಪಿ : ಲಾಡ್ಜ್ ಗೆ ಅಪ್ರಾಪ್ತ ಬಾಲಕಿಯ ಜೊತೆ ತೆರಳಿದ್ದ ಯುವಕನೊಬ್ಬ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ. ಲಾಡ್ಜ್ ನಲ್ಲಿ ಸಿಕ್ಕಿ ಬಿದ್ದ ಯುವಕನನ್ನು ಕಟಪಾಡಿ ಮಣಿಪುರದ ನಿವಾಸಿ ಶ್ರೀಶಾಂತ್ ಪೂಜಾರಿ (20) ಎಂದು ಗುರುತಿಸಲಾಗಿದೆ.
ಶ್ರೀಶಾಂತ್ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಮಣಿಪಾಲದ ಲಾಡ್ಜ್ಗೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ. ಇದರ ಮಾಹಿತಿ ತಿಳಿದು ಬಾಲಕಿಯ ಪೋಷಕರು ನೇರವಾಗಿ ಲಾಡ್ಜ್ಗೆ ಪೊಲೀಸರೊಂದಿಗೆ ದಾಳಿ ಮಾಡಿದ್ದಾರೆ. ಬಾಲಕಿಯ ನಕಲಿ ಆಧಾರ್ ಕಾರ್ಡ್ ನೀಡಿ ಕರೆದುಕೊಂಡು ಹೋಗಿದ್ದು, ಆತನ ವಿರುದ್ಧ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಇನ್ನೋರ್ವ ಬಾಲಕಿ ಆತನ ವಿರುದ್ಧ ದೂರು ದಾಖಲಿಸಿದ್ದಾಳೆ. ನನಗೂ ಶ್ರೀಶಾಂತ್ ಮದುವೆ ಆಗುವುದಾಗಿ ನಂಬಿಸಿ ಲಾಡ್ಜ್ಗೆ ಕರೆದುಕೊಂಡು ಹೋಗಿದ್ದನು ಎಂದು ದೂರಿನಲ್ಲಿ ತಿಳಿಸಿದ್ದಾಳೆ.
ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿದೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…