ಉಡುಪಿ : ಲಾಡ್ಜ್ ಗೆ ಅಪ್ರಾಪ್ತ ಬಾಲಕಿಯ ಜೊತೆ ತೆರಳಿದ್ದ ಯುವಕನೊಬ್ಬ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ. ಲಾಡ್ಜ್ ನಲ್ಲಿ ಸಿಕ್ಕಿ ಬಿದ್ದ ಯುವಕನನ್ನು ಕಟಪಾಡಿ ಮಣಿಪುರದ ನಿವಾಸಿ ಶ್ರೀಶಾಂತ್ ಪೂಜಾರಿ (20) ಎಂದು ಗುರುತಿಸಲಾಗಿದೆ.
ಶ್ರೀಶಾಂತ್ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಮಣಿಪಾಲದ ಲಾಡ್ಜ್ಗೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ. ಇದರ ಮಾಹಿತಿ ತಿಳಿದು ಬಾಲಕಿಯ ಪೋಷಕರು ನೇರವಾಗಿ ಲಾಡ್ಜ್ಗೆ ಪೊಲೀಸರೊಂದಿಗೆ ದಾಳಿ ಮಾಡಿದ್ದಾರೆ. ಬಾಲಕಿಯ ನಕಲಿ ಆಧಾರ್ ಕಾರ್ಡ್ ನೀಡಿ ಕರೆದುಕೊಂಡು ಹೋಗಿದ್ದು, ಆತನ ವಿರುದ್ಧ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಇನ್ನೋರ್ವ ಬಾಲಕಿ ಆತನ ವಿರುದ್ಧ ದೂರು ದಾಖಲಿಸಿದ್ದಾಳೆ. ನನಗೂ ಶ್ರೀಶಾಂತ್ ಮದುವೆ ಆಗುವುದಾಗಿ ನಂಬಿಸಿ ಲಾಡ್ಜ್ಗೆ ಕರೆದುಕೊಂಡು ಹೋಗಿದ್ದನು ಎಂದು ದೂರಿನಲ್ಲಿ ತಿಳಿಸಿದ್ದಾಳೆ.
ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿದೆ.
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…