ಉಡುಪಿ: ದರೋಡೆಕೋರರು, ಕಳ್ಳಕಾಕರನ್ನು ಹಿಡಿದು ಸಿಂಗಂ ಆಗಬೇಕು, ಅಮಾಯಕರನ್ನು ಹೊಡೆದು ಸಿಂಗಂ ಆಗಬೇಡಿ ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಪೊಲೀಸರಿಗೆ ತಿಳಿಹೇಳಿದ್ದಾರೆ.
ಕೋಟತಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಕೊರಗ ಕಾಲನಿಯಲ್ಲಿ ಸೋಮವಾರ ರಾತ್ರಿ ನಡೆಯುತ್ತಿದ್ದ ಮೆಹೆಂದಿ ಕಾರ್ಯಕ್ರಮದ ವೇಳೆ ಆಗಮಿಸಿ ಏಕಾಏಕಿಕೊರಗ ಸಮುದಾಯದವರ ಮೇಲೆ ಹಲ್ಲೆ ನಡೆಸಿದ ಕೋಟ ಪಿಎಸ್ಐ ಹಾಗೂ ಸಿಬ್ಬಂದಿಗಳ ಮೇಲೆ ಶಾಸಕ ಹಾಲಾಡಿ ಅಸಮಾಧಾನ ವ್ಯಕ್ತಪಡಿಸಿದರು. ಕೊರಗ ನಿವಾಸಿಗಳ ನೋವನ್ನು ಆಲಿಸಿದ ಅವರು ಸೂಕ್ತ ಕ್ರಮದ ಭರವಸೆ ನೀಡಿದರು.
ಕೊರಗ ನಿವಾಸಿಗಳ ಮೇಲೆ ಕೋಟ ಪಿಎಸ್ಐ ಹಲ್ಲೆ ಮಾಡಿದ್ದು ದುರ್ಘಟನೆ, ಹೀಗಾಗಬಾರದಿತ್ತು. ಈ ಪಿಎಸ್ಐ ಬಗ್ಗೆ ಹಲವು ದೂರುಗಳಿದೆ. ಈ ಬಗ್ಗೆ ಮೇಲಾಧಿಕಾರಿಗಳ ಬಳಿ ಮಾತನಾಡಿದ್ದು ಸದ್ಯ ಆರೋಪಿ ಪಿಎಸ್ಐ ಅವರನ್ನು ಬದಲಾಯಿಸಿ ಬೇರೊಬ್ಬರನ್ನು ನಿಯೋಜಿಸಲಾಗಿದೆ. ಇಲಾಖೆ ತನಿಖೆ ವರದಿ ಆಧರಿಸಿ ಶೀಘ್ರವೇ ಅವರನ್ನು ಅಮಾನತು ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆಂದು ಶಾಸಕರು ಮಾಹಿತಿ ನೀಡಿದರು.
ಕೊರಗ ಸಮುದಾಯದವರು ಅತ್ಯಂತ ಮುಗ್ಧರು. ಅವರು ಯಾವುದೇ ಸುಳ್ಳು ಕೇಸು ಹಾಕುವ ಜನರಲ್ಲ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಇರುವ ಮಂದಿ. ಅಂತವರ ಮೇಲೆ ಇಲಾಖೆಯವರು ಹಲ್ಲೆ ನಡೆಸಿದ್ದು ನಿಜಕ್ಕೂ ನೋವುಂಟು ಮಾಡಿದ್ದು ವ್ಯವಸ್ಥೆ ಬಗ್ಗೆ ಕ್ಷಮೆ ಕೇಳುವೆ. ಈ ಪಿಎಸ್ಐ ಬಗ್ಗೆ ಹಲವು ದೂರುಗಳು ಕೇಳಿಬರುತ್ತಿದೆ. ಅಂತವರು ಇಲ್ಲಿರಲು ಸಾಧ್ಯವಿಲ್ಲ. . ಒಂದೊಮ್ಮೆ ಪಿಎಸ್ಐ ಮೆಹೆಂದಿ ಕಾರ್ಯಕ್ರಮಕ್ಕೆ ಬರುವಾಗ ಇಲ್ಲೇನಾದರೂ ತಪ್ಪುಕಂಡುಬಂದಿದ್ದರೆ ತಿಳಿಹೇಳಬಹುದಿತ್ತು ಅಥವಾ ನೋಟಿಸ್ ಮಾಡಬಹುದಿತ್ತು. ಅದೆಲ್ಲವನ್ನೂ ಬಿಟ್ಟು ಒಬ್ಬ ಸರಕಾರಿ ಅಧಿಕಾರಿಯಾಗಿ ದುರ್ವರ್ತನೆ ತೋರಿರುವುದು ಸರಿಯಲ್ಲ. ಆಗಿರುವ ಪ್ರಮಾದ ಸಣ್ಣದಲ್ಲ ಎಂದರು.
ಈ ಸಂದರ್ಭ ಕೊರಗ ಮುಖಂಡರಾದ ಗಣೇಶ್ ಕುಂದಾಪುರ, ಗಣೇಶ್ ಬಾರ್ಕೂರು, ಬ್ರಹ್ಮಾವರ ತಹಶಿಲ್ದಾರ್ ರಾಜಶೇಖರ್ ಮೂರ್ತಿ, ಕುಂದಾಪುರ ಬಿಜೆಪಿ ಕ್ಷೇತ್ರಾಧ್ಯಕ್ಷ ಶಂಕರ್ ಅಂಕದಕಟ್ಟೆ, ನ್ಯಾಯವಾದಿ ಪ್ರಮೋದ್ ಹಂದೆ, ಸ್ಥಳೀಯ ಪ್ರಮುಖರಾದ ರಂಜಿತ್ ಕುಮಾರ್ ಕೋಟ, ರತ್ನಾಕರ ಬಾರಿಕೆರೆ, ಶಂಕರ್ ಕೋಟ, ರವೀಂದ್ರ ತಿಂಗಳಾಯ, ನಾಗರಾಜ್ ಮೊದಲಾದವರಿದ್ದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…