ಉಡುಪಿ

ಉಡುಪಿ : ಅಮಾಯಕರನ್ನು ಹೊಡೆದು‌ ಸಿಂಗಂ ಆಗಬೇಡಿ : ಪೊಲೀಸರಿಗೆ ಹಾಲಾಡಿ ಶ್ರೀನಿವಾಸ ಶೆಟ್ಟಿ – Vishwanews24

ಉಡುಪಿ:ಅಮಾಯಕರನ್ನು ಹೊಡೆದು‌ ಸಿಂಗಂ ಆಗಬೇಡಿ , ದರೋಡೆಕೋರರು, ಕಳ್ಳಕಾಕರನ್ನು ಹಿಡಿದು ಸಿಂಗಂ ಆಗಬೇಕು : ಪೊಲೀಸರಿಗೆ ಹಾಲಾಡಿ ಶ್ರೀನಿವಾಸ ಶೆಟ್ಟಿ – Vishwanews24

ಉಡುಪಿ: ದರೋಡೆಕೋರರು, ಕಳ್ಳಕಾಕರನ್ನು ಹಿಡಿದು ಸಿಂಗಂ ಆಗಬೇಕು, ಅಮಾಯಕರನ್ನು ಹೊಡೆದು‌ ಸಿಂಗಂ ಆಗಬೇಡಿ ಎಂದು‌ ಕುಂದಾಪುರ ಶಾಸಕ‌ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಪೊಲೀಸರಿಗೆ ತಿಳಿಹೇಳಿದ್ದಾರೆ.

ಕೋಟತಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಕೊರಗ ಕಾಲನಿಯಲ್ಲಿ ಸೋಮವಾರ ರಾತ್ರಿ‌ ನಡೆಯುತ್ತಿದ್ದ‌ ಮೆಹೆಂದಿ‌ ಕಾರ್ಯಕ್ರಮದ ವೇಳೆ ಆಗಮಿಸಿ ಏಕಾಏಕಿ‌ಕೊರಗ ಸಮುದಾಯದವರ ಮೇಲೆ ಹಲ್ಲೆ ನಡೆಸಿದ ಕೋಟ ಪಿಎಸ್ಐ ಹಾಗೂ ಸಿಬ್ಬಂದಿಗಳ ಮೇಲೆ ಶಾಸಕ ಹಾಲಾಡಿ‌ ಅಸಮಾಧಾನ ವ್ಯಕ್ತಪಡಿಸಿದರು. ಕೊರಗ ನಿವಾಸಿಗಳ ನೋವನ್ನು ಆಲಿಸಿದ ಅವರು ಸೂಕ್ತ ಕ್ರಮದ ಭರವಸೆ ನೀಡಿದರು.

ಕೊರಗ ನಿವಾಸಿಗಳ‌ ಮೇಲೆ ಕೋಟ ಪಿಎಸ್ಐ ಹಲ್ಲೆ ಮಾಡಿದ್ದು ದುರ್ಘಟನೆ, ಹೀಗಾಗಬಾರದಿತ್ತು. ಈ ಪಿಎಸ್ಐ ಬಗ್ಗೆ ಹಲವು ದೂರುಗಳಿದೆ. ಈ ಬಗ್ಗೆ ಮೇಲಾಧಿಕಾರಿಗಳ ಬಳಿ‌ ಮಾತನಾಡಿದ್ದು ಸದ್ಯ ಆರೋಪಿ‌ ಪಿಎಸ್ಐ ಅವರನ್ನು ಬದಲಾಯಿಸಿ ಬೇರೊಬ್ಬರನ್ನು ನಿಯೋಜಿಸಲಾಗಿದೆ. ಇಲಾಖೆ ತನಿಖೆ ವರದಿ ಆಧರಿಸಿ ಶೀಘ್ರವೇ ಅವರನ್ನು ಅಮಾನತು‌ ಮಾಡಲಾಗುತ್ತದೆ ಎಂದು‌ ಅಧಿಕಾರಿಗಳು‌ ತಿಳಿಸಿದ್ದಾರೆಂದು ಶಾಸಕರು‌ ಮಾಹಿತಿ ನೀಡಿದರು.

ಕೊರಗ ಸಮುದಾಯದವರು ಅತ್ಯಂತ‌ ಮುಗ್ಧರು. ಅವರು ಯಾವುದೇ ಸುಳ್ಳು ಕೇಸು ಹಾಕುವ ಜನರಲ್ಲ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಇರುವ ಮಂದಿ. ಅಂತವರ ಮೇಲೆ ಇಲಾಖೆಯವರು ಹಲ್ಲೆ ನಡೆಸಿದ್ದು ನಿಜಕ್ಕೂ ನೋವುಂಟು ಮಾಡಿದ್ದು ವ್ಯವಸ್ಥೆ ಬಗ್ಗೆ ಕ್ಷಮೆ ಕೇಳುವೆ. ಈ ಪಿಎಸ್ಐ ಬಗ್ಗೆ ಹಲವು ದೂರುಗಳು ಕೇಳಿಬರುತ್ತಿದೆ. ಅಂತವರು ಇಲ್ಲಿರಲು ಸಾಧ್ಯವಿಲ್ಲ. . ಒಂದೊಮ್ಮೆ ಪಿಎಸ್ಐ ಮೆಹೆಂದಿ‌ ಕಾರ್ಯಕ್ರಮಕ್ಕೆ ಬರುವಾಗ ಇಲ್ಲೇನಾದರೂ ತಪ್ಪು‌ಕಂಡುಬಂದಿದ್ದರೆ ತಿಳಿಹೇಳಬಹುದಿತ್ತು ಅಥವಾ ನೋಟಿಸ್ ಮಾಡಬಹುದಿತ್ತು. ಅದೆಲ್ಲವನ್ನೂ‌ ಬಿಟ್ಟು ಒಬ್ಬ ಸರಕಾರಿ ಅಧಿಕಾರಿಯಾಗಿ ದುರ್ವರ್ತನೆ ತೋರಿರುವುದು ಸರಿಯಲ್ಲ. ಆಗಿರುವ ಪ್ರಮಾದ ಸಣ್ಣದಲ್ಲ ಎಂದರು.

ಈ ಸಂದರ್ಭ ಕೊರಗ ಮುಖಂಡರಾದ ಗಣೇಶ್ ಕುಂದಾಪುರ, ಗಣೇಶ್ ಬಾರ್ಕೂರು, ಬ್ರಹ್ಮಾವರ ತಹಶಿಲ್ದಾರ್ ರಾಜಶೇಖರ್ ಮೂರ್ತಿ, ಕುಂದಾಪುರ ಬಿಜೆಪಿ‌ ಕ್ಷೇತ್ರಾಧ್ಯಕ್ಷ ಶಂಕರ್ ಅಂಕದಕಟ್ಟೆ, ನ್ಯಾಯವಾದಿ ಪ್ರಮೋದ್ ಹಂದೆ, ಸ್ಥಳೀಯ ಪ್ರಮುಖರಾದ ರಂಜಿತ್ ಕುಮಾರ್ ಕೋಟ, ರತ್ನಾಕರ ಬಾರಿಕೆರೆ, ಶಂಕರ್ ಕೋಟ, ರವೀಂದ್ರ ತಿಂಗಳಾಯ, ನಾಗರಾಜ್ ಮೊದಲಾದವರಿದ್ದರು.

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

6 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

8 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

8 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

8 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

8 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

9 hours ago