ಉಡುಪಿ

ಉಡುಪಿ : ಅಮಾಯಕರನ್ನು ಹೊಡೆದು‌ ಸಿಂಗಂ ಆಗಬೇಡಿ : ಪೊಲೀಸರಿಗೆ ಹಾಲಾಡಿ ಶ್ರೀನಿವಾಸ ಶೆಟ್ಟಿ – Vishwanews24

ಉಡುಪಿ:ಅಮಾಯಕರನ್ನು ಹೊಡೆದು‌ ಸಿಂಗಂ ಆಗಬೇಡಿ , ದರೋಡೆಕೋರರು, ಕಳ್ಳಕಾಕರನ್ನು ಹಿಡಿದು ಸಿಂಗಂ ಆಗಬೇಕು : ಪೊಲೀಸರಿಗೆ ಹಾಲಾಡಿ ಶ್ರೀನಿವಾಸ ಶೆಟ್ಟಿ – Vishwanews24

ಉಡುಪಿ: ದರೋಡೆಕೋರರು, ಕಳ್ಳಕಾಕರನ್ನು ಹಿಡಿದು ಸಿಂಗಂ ಆಗಬೇಕು, ಅಮಾಯಕರನ್ನು ಹೊಡೆದು‌ ಸಿಂಗಂ ಆಗಬೇಡಿ ಎಂದು‌ ಕುಂದಾಪುರ ಶಾಸಕ‌ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಪೊಲೀಸರಿಗೆ ತಿಳಿಹೇಳಿದ್ದಾರೆ.

ಕೋಟತಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಕೊರಗ ಕಾಲನಿಯಲ್ಲಿ ಸೋಮವಾರ ರಾತ್ರಿ‌ ನಡೆಯುತ್ತಿದ್ದ‌ ಮೆಹೆಂದಿ‌ ಕಾರ್ಯಕ್ರಮದ ವೇಳೆ ಆಗಮಿಸಿ ಏಕಾಏಕಿ‌ಕೊರಗ ಸಮುದಾಯದವರ ಮೇಲೆ ಹಲ್ಲೆ ನಡೆಸಿದ ಕೋಟ ಪಿಎಸ್ಐ ಹಾಗೂ ಸಿಬ್ಬಂದಿಗಳ ಮೇಲೆ ಶಾಸಕ ಹಾಲಾಡಿ‌ ಅಸಮಾಧಾನ ವ್ಯಕ್ತಪಡಿಸಿದರು. ಕೊರಗ ನಿವಾಸಿಗಳ ನೋವನ್ನು ಆಲಿಸಿದ ಅವರು ಸೂಕ್ತ ಕ್ರಮದ ಭರವಸೆ ನೀಡಿದರು.

ಕೊರಗ ನಿವಾಸಿಗಳ‌ ಮೇಲೆ ಕೋಟ ಪಿಎಸ್ಐ ಹಲ್ಲೆ ಮಾಡಿದ್ದು ದುರ್ಘಟನೆ, ಹೀಗಾಗಬಾರದಿತ್ತು. ಈ ಪಿಎಸ್ಐ ಬಗ್ಗೆ ಹಲವು ದೂರುಗಳಿದೆ. ಈ ಬಗ್ಗೆ ಮೇಲಾಧಿಕಾರಿಗಳ ಬಳಿ‌ ಮಾತನಾಡಿದ್ದು ಸದ್ಯ ಆರೋಪಿ‌ ಪಿಎಸ್ಐ ಅವರನ್ನು ಬದಲಾಯಿಸಿ ಬೇರೊಬ್ಬರನ್ನು ನಿಯೋಜಿಸಲಾಗಿದೆ. ಇಲಾಖೆ ತನಿಖೆ ವರದಿ ಆಧರಿಸಿ ಶೀಘ್ರವೇ ಅವರನ್ನು ಅಮಾನತು‌ ಮಾಡಲಾಗುತ್ತದೆ ಎಂದು‌ ಅಧಿಕಾರಿಗಳು‌ ತಿಳಿಸಿದ್ದಾರೆಂದು ಶಾಸಕರು‌ ಮಾಹಿತಿ ನೀಡಿದರು.

ಕೊರಗ ಸಮುದಾಯದವರು ಅತ್ಯಂತ‌ ಮುಗ್ಧರು. ಅವರು ಯಾವುದೇ ಸುಳ್ಳು ಕೇಸು ಹಾಕುವ ಜನರಲ್ಲ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಇರುವ ಮಂದಿ. ಅಂತವರ ಮೇಲೆ ಇಲಾಖೆಯವರು ಹಲ್ಲೆ ನಡೆಸಿದ್ದು ನಿಜಕ್ಕೂ ನೋವುಂಟು ಮಾಡಿದ್ದು ವ್ಯವಸ್ಥೆ ಬಗ್ಗೆ ಕ್ಷಮೆ ಕೇಳುವೆ. ಈ ಪಿಎಸ್ಐ ಬಗ್ಗೆ ಹಲವು ದೂರುಗಳು ಕೇಳಿಬರುತ್ತಿದೆ. ಅಂತವರು ಇಲ್ಲಿರಲು ಸಾಧ್ಯವಿಲ್ಲ. . ಒಂದೊಮ್ಮೆ ಪಿಎಸ್ಐ ಮೆಹೆಂದಿ‌ ಕಾರ್ಯಕ್ರಮಕ್ಕೆ ಬರುವಾಗ ಇಲ್ಲೇನಾದರೂ ತಪ್ಪು‌ಕಂಡುಬಂದಿದ್ದರೆ ತಿಳಿಹೇಳಬಹುದಿತ್ತು ಅಥವಾ ನೋಟಿಸ್ ಮಾಡಬಹುದಿತ್ತು. ಅದೆಲ್ಲವನ್ನೂ‌ ಬಿಟ್ಟು ಒಬ್ಬ ಸರಕಾರಿ ಅಧಿಕಾರಿಯಾಗಿ ದುರ್ವರ್ತನೆ ತೋರಿರುವುದು ಸರಿಯಲ್ಲ. ಆಗಿರುವ ಪ್ರಮಾದ ಸಣ್ಣದಲ್ಲ ಎಂದರು.

ಈ ಸಂದರ್ಭ ಕೊರಗ ಮುಖಂಡರಾದ ಗಣೇಶ್ ಕುಂದಾಪುರ, ಗಣೇಶ್ ಬಾರ್ಕೂರು, ಬ್ರಹ್ಮಾವರ ತಹಶಿಲ್ದಾರ್ ರಾಜಶೇಖರ್ ಮೂರ್ತಿ, ಕುಂದಾಪುರ ಬಿಜೆಪಿ‌ ಕ್ಷೇತ್ರಾಧ್ಯಕ್ಷ ಶಂಕರ್ ಅಂಕದಕಟ್ಟೆ, ನ್ಯಾಯವಾದಿ ಪ್ರಮೋದ್ ಹಂದೆ, ಸ್ಥಳೀಯ ಪ್ರಮುಖರಾದ ರಂಜಿತ್ ಕುಮಾರ್ ಕೋಟ, ರತ್ನಾಕರ ಬಾರಿಕೆರೆ, ಶಂಕರ್ ಕೋಟ, ರವೀಂದ್ರ ತಿಂಗಳಾಯ, ನಾಗರಾಜ್ ಮೊದಲಾದವರಿದ್ದರು.

Vishwa News 24

Recent Posts

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ ಉದ್ಘಾಟನೆ – vishwanews24

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…

3 hours ago

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಅಭಿಷೇಕ್ ಪೂಜಾರಿ ಸಾವು – vishwanews24

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…

4 hours ago

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ – vishwanews24

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್‌: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…

6 hours ago

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ – vishwanews24

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…

6 hours ago

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ – vishwanews24

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…

7 hours ago

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು : ಯತೀಂದ್ರ ಸಿದ್ದರಾಮಯ್ಯ – vishwanews24

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…

7 hours ago