ಉಡುಪಿ: ಶಿರ್ವ ಮೂಲದ ಯುವಕನನ್ನು ಅಮೆರಿಕದ ಸ್ಯಾನ್ಬರ್ನಾಡಿಯೊ ಎಂಬ ಪ್ರದೇಶದಲ್ಲಿ ಗುಂಡಿಟ್ಟು ಹತ್ಯೆಗೈದ ದುರಂತ ಘಟನೆ ವರದಿಯಾಗಿದೆ.
ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಯಾನ್ ಬರ್ನಾರ್ಡ್ಡಿನೋ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿ, ಅಭಿಷೇಕ್ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಕೊಂದಿದ್ದಾರೆ.
ಶಿರ್ವ ಮೂಲದ ಮೈಸೂರು ಕುವೆಂಪು ನಗರ ನಿವಾಸಿ ಅಭಿಷೇಕ್ (25), ಈ ಹೊಟೆಲ್ನಲ್ಲಿ ಲಾಡ್ಜಿಂಗ್ ವ್ಯವಸ್ಥೆ ಇತ್ತು. ಅಲ್ಲಿಗೆ ಆಗಮಿಸಿದ್ದ ಗ್ರಾಹಕರೋರ್ವರು ಸಮಯ ಮುಗಿದರೂ ಉಳಿದುಕೊಂಡಿದ್ದರು. ಅವರ ಬಳಿ ಹೋಗಿ ರೂಂ ಖಾಲಿ ಮಾಡಿ ಎಂದು ಅಭಿಷೇಕ್ ಹೇಳಿದ್ದ. ಅದಾದ ಬಳಿಕ ಅಮೆರಿಕ ಕಾಲಮಾನದಂತೆ ನ.28ರ ಮಧ್ಯಾಹ್ನ 12.30ಕ್ಕೆ ಅಭಿಷೇಕ್ ಮತ್ತು ಗ್ರಾಹಕನ ನಡುವೆ ಮಾತಿನ ಚಕಮಕಿ ನಡೆದಿತ್ತು. ಇದೇ ವೇಳೆ ಸಿಟ್ಟಿಗೆದ್ದ ಆ ಗ್ರಾಹಕ ಅಭಿಷೇಕ್ ಹಣೆಗೆ ಗುಂಡು ಹೊಡೆದಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ. ಪೊಲೀಸರು ಮತ್ತು ಸ್ಟೇಟ್ ಹೆಲ್ತ್ ಆಫೀಸರ್ಗಳ ತಂಡ ತನಿಖೆ ಕೈಗೊಂಡಿದೆ.
ಅಭಿಷೇಕ್ 2 ದಿನಗಳ ಹಿಂದೆ ಅವರ ತಂದೆಯ ಜೊತೆ ಫೋನಿನಲ್ಲಿ ಮಾತನಾಡಿದ್ದು, ನಂತರ ಘಟನೆ ನಡೆಯುವ 15 ನಿಮಿಷಕ್ಕೂ ಮುಂಚೆ ಮನೆಗೆ ಸಂದೇಶ ಕೂಡ ಕಳುಹಿಸಿದ್ದಾರೆ. ಇದಾದ 15 ನಿಮಿಷಕ್ಕೆ ಅವರು ಸಾವನ್ನಪ್ಪಿದ್ದಾರೆ.
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…