Featured

ಉಡುಪಿ : ಅಯೋಧ್ಯೆಯಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ ಕರ್ನಾಟಕ ಭವನ ನಿರ್ಮಿಸುವಂತೆ ಸಿಎಂ ಗೆ ಯಶ್ಪಾಲ್ ಸುವರ್ಣ ಮನವಿ – vishwanews24

ಉಡುಪಿ : ಅಯೋಧ್ಯೆಯಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ ಕರ್ನಾಟಕ ಭವನ ನಿರ್ಮಿಸುವಂತೆ ಸಿಎಂ ಗೆ ಯಶ್ಪಾಲ್ ಸುವರ್ಣ ಮನವಿ

ಉಡುಪಿ: ಅಯೋಧ್ಯೆ ಶ್ರೀ ರಾಮ ಮಂದಿರಕ್ಕೆ ಭೇಟಿ ನೀಡುವ ರಾಜ್ಯದ ಕೋಟ್ಯಾಂತರ ಭಕ್ತರ ಅನುಕೂಲಕ್ಕಾಗಿ ರಾಜ್ಯ ಸರಕಾರ ಸುಸಜ್ಜಿತ ಕರ್ನಾಟಕ ಭವನ ನಿರ್ಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆಗೆ ಹಾಗೂ ಭವ್ಯ ರಾಮ ಮಂದಿರದ ಉದ್ಘಾಟನೆಗೆ ಈಗಾಗಲೇ ವಿಶ್ವದೆಲ್ಲೆಡೆ ದಿನಗಣನೆ ಶುರುವಾಗಿದೆ.

ಶ್ರೀ ರಾಮ ಮಂದಿರದ ನಿರ್ಮಾಣದ ಇತಿಹಾಸಗಳ ಕೋಟ್ಯಾಂತರ ಭಾರತೀಯರ ಕನಸು ಸಾಕಾರವಾಗುತ್ತಿದ್ದು, ಅಯೋಧ್ಯೆಯು ಮುಂದಿನ ದಿನಗಳಲ್ಲಿ ಕೋಟ್ಯಾಂತರ ಭಕ್ತಾಧಿಗಳ ಪಾಲಿಗೆ ಪ್ರಾಶಸ್ತ್ಯದ ಪುಣ್ಯ ಕ್ಷೇತ್ರವಾಗಿ ರೂಪುಗೊಳ್ಳಲಿದೆ.

ಅಯೋಧ್ಯೆಯಲ್ಲಿ ಶ್ರೀರಾಮ ದೇವರ ದರ್ಶನ ಪಡೆಯಲು ದೇಶದ ಹಲವು ಕಡೆಗಳಿಂದ ಭಕ್ತರು ಆಗಮಿಸಲಿದ್ದು ಅದರಲ್ಲೂ ವಿಶೇಷವಾಗಿ ಕರ್ನಾಟಕದಲ್ಲಿ ಬಹುದೊಡ್ಡ ಸಂಖ್ಯೆಯ ಶ್ರೀರಾಮ ದೇವರ ಆರಾಧಕರಿದ್ದು ಅಯೋಧ್ಯೆಗೆ ಲಕ್ಷಾಂತರ ಜನರು ನಿಯಮಿತವಾಗಿ ತೆರಳಲಿದ್ದಾರೆ.

ದೇಶದ ವಿವಿಧ ಪುಣ್ಯ ಕ್ಷೇತ್ರಗಳಲ್ಲಿ ಕರ್ನಾಟಕ ಭವನದ ನಿರ್ಮಾಣದಿಂದಾಗಿ ಕರ್ನಾಟಕದ ಪ್ರವಾಸಿಗರಿಗೆ ವಾಸ್ತವ್ಯಕ್ಕೆ ಸಾಕಷ್ಟು ಅನುಕೂಲವಾಗಿರುತ್ತದೆ.

ಶ್ರೀರಾಮ ದೇವರ ದರ್ಶನ ಪಡೆಯಲು ತೆರಳುವ ಕನ್ನಡಿಗರ ವಿಶ್ರಾಂತಿಗೆ ಹಾಗೂ ವಾಸ್ತವ್ಯಕ್ಕೆ ಅನುಕೂಲವಾಗುವಂತೆ ಅಯೋಧ್ಯೆಯಲ್ಲಿ ಒಂದು ಕರ್ನಾಟಕ ಭವನ ನಿರ್ಮಾಣದ ಅಗತ್ಯವಿದ್ದು ಕರ್ನಾಟಕದಿಂದ ಅಯೋಧ್ಯೆಗೆ ತೆರಳಲಿರುವ ಕನ್ನಡಿಗರ ವಾಸ್ತವ್ಯಕ್ಕೆ ಸಹಾಯವಾಗುವಂತೆ ಕರ್ನಾಟಕ ಭವನವನ್ನು ಅಯೋಧ್ಯೆಯಲ್ಲಿ ಶೀಘ್ರವಾಗಿ ನಿರ್ಮಾಣ ಮಾಡಿ ಭಕ್ತರಿಗೆ ಹಾಗೂ ಪ್ರವಾಸಿಗರಿಗೆ ಅನುಕೂಲ ಮಾಡಿ ಕೊಡುವಂತೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

Vishwa News 24

Recent Posts

ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು  – vishwanews24

ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು  ಉಡುಪಿ: ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ…

3 minutes ago

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ – vishwanews24

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ ಮಂಗಳೂರು:ಬಂಟ್ವಾಳದ ಬಿ.ಸಿ. ರಸ್ತೆಯ ಕೆಎಸ್‌ಆರ್‌ಟಿಸಿ…

24 minutes ago

ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ – vishwanews24

ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ ಕಾರವಾರ: ಉತ್ತರ ಕನ್ನಡ  ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಕುಮಟಾ ತಾಲೂಕಿನ…

31 minutes ago

ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ – vishwanews24

ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ ಕಾರ್ಕಳ: ನಗರದ ಶಿವತಿಕೆರೆ ಸಮೀಪ ರವಿವಾರ…

38 minutes ago

ಮೈಸೂರಿನ ದಸರಾದಲ್ಲಿ ಕಂಬಳ ನಡೆದೇ ನಡೆಯುತ್ತೆ : ಅಶೋಕ್ ರೈ – vishwanews24

ಮೈಸೂರಿನ ದಸರಾದಲ್ಲಿ ಕಂಬಳ ನಡೆದೇ ನಡೆಯುತ್ತೆ , ಈಗಾಗಲೇ 182 ಕೋಣಗಳು ರಿಜಿಸ್ಟರ್ ಆಗಿದೆ : ಅಶೋಕ್ ರೈ ಬೆಂಗಳೂರು:…

47 minutes ago

ಉಡುಪಿ : ಕೂಡ್ಲು ಫಾಲ್ಸ್‌ಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿಷೇಧ – vishwanews24

ಉಡುಪಿ: ಕೂಡ್ಲು ಜಲಪಾತಕ್ಕೆ ತಾತ್ಕಾಲಿಕ ಪ್ರವೇಶ ನಿಷೇಧ ಉಡುಪಿ: ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿನ ಅತ್ಯಂತ ಜನಪ್ರಿಯ ತಾಣಗಳಲ್ಲಿ ಒಂದಾದ…

59 minutes ago