Featured

ಉಡುಪಿ: ಅಯೋಧ್ಯೆಯಲ್ಲಿ 25 ಸಾವಿರ ಜನರ ವಸತಿ ಸಾಮರ್ಥ್ಯದ ಬೃಹತ್‌ ಯಾತ್ರಿ ಭವನ ನಿರ್ಮಾಣ  : ಪೇಜಾವರ ಶ್ರೀ – Vishwanews24

ಉಡುಪಿ: ಅಯೋಧ್ಯೆಯಲ್ಲಿ 25 ಸಾವಿರ ಜನರ ವಸತಿ ಸಾಮರ್ಥ್ಯದ ಬೃಹತ್‌ ಯಾತ್ರಿ ಭವನ ನಿರ್ಮಾಣ  : ಪೇಜಾವರ ಶ್ರೀ

ಉಡುಪಿ: ಅಯೋಧ್ಯೆ ಮಂದಿರ ನಿರ್ಮಾಣ ಕಾರ್ಯ ವೇಗವಾಗಿ ನಡೆಯುತ್ತಿದ್ದು, ಪ್ರಸ್ತುತ ಗರ್ಭಗುಡಿಯ ಪೀಠದ ಮೇಲೆ ಸ್ತಂಭಗಳ ಜೋಡಣೆ ಮತ್ತು ಗೋಡೆ ನಿರ್ಮಾಣ ನಡೆಯುತ್ತಿದೆ.

ಮುಂದಿನ ಹತ್ತು ದಿನಗಳಲ್ಲಿ ಮೇಲ್ಛಾವಣಿಯ ಶಿಲಾ ಬೀಮ್‌ ಮತ್ತು ಶಿಲಾ ಹೊದಿಕೆಗಳನ್ನು ಅಳವಡಿಸುವ ಕಾರ್ಯ ಆರಂಭವಾಗಲಿದೆ. ಮಂದಿರದ ಲೋಕಾರ್ಪಣೆ ವೇಳೆಗೆ ದೇಶಾದ್ಯಂತದಿಂದ ಆಗಮಿಸುವ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ 25 ಸಾವಿರ ಜನರ ವಸತಿ ಸಾಮರ್ಥ್ಯದ ಬೃಹತ್‌ ಯಾತ್ರಿ ಭವನ ನಿರ್ಮಿಸಲಾಗುತ್ತಿದೆ ಎಂದು ಅಯೋಧ್ಯಾ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ವಿಶ್ವಸ್ತರಾಗಿರುವ ಶ್ರೀ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು.

ಮಂಗಳವಾರ ಅಯೋಧ್ಯೆಗೆ ಭೇಟಿ ನೀಡಿ ರಾಮ ಮಂದಿರ ನಿರ್ಮಾಣ ಕಾರ್ಯ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.

ಉತ್ತಮ ಶಿಲೆಯಿಂದ ವಿಗ್ರಹ ನಿರ್ಮಾಣ
ಮಂದಿರದಲ್ಲಿ ಪ್ರತಿಷ್ಠಾಪಿಸಲಾಗುವ ಶ್ರೀ ರಾಮ, ಲಕ್ಷ್ಮಣ, ಸೀತೆಯ ವಿಗ್ರಹಗಳ ನಿರ್ಮಾಣಕ್ಕಾಗಿ ಕರ್ನಾಟಕದ ಹೆಗ್ಗಡೆ ದೇವನಕೋಟೆ, ಕಾರ್ಕಳ, ತಮಿಳುನಾಡಿನ ಮಹಾಬಲಿಪುರಂ, ರಾಜಸ್ಥಾನ ಹಾಗೂ ನೇಪಾಲಗಳಿಂದ ಶಿಲೆಗಳನ್ನು ತರಲಾಗಿದ್ದು, ಶಿಲ್ಪಿಗಳು ಅವುಗಳ ಪರಿಶೀಲನೆ ನಡೆಸಿ ಉತ್ತಮವಾದವುಗಳನ್ನು ಆಯ್ದುಕೊಂಡು ಪ್ರತಿಮೆಗಳನ್ನು ನಿರ್ಮಿಸಲಾಗುತ್ತದೆ ಎಂದರು.

ಟ್ರಸ್ಟ್‌ ಕಾರ್ಯದರ್ಶಿ ಚಂಪತ್‌ ರಾಯ್‌, ವಿಹಿಂಪ ಮುಖಂಡ ಗೋಪಾಲ್‌, ಮಠದ ಕೃಷ್ಣ ಭಟ್‌, ಅಯೋಧ್ಯೆ ಪೇಜಾವರ ಮಠದ ವ್ಯವಸ್ಥಾಪಕ ಮಹೇಂದ್ರ ದುಬೆ ಉಪಸ್ಥಿತರಿದ್ದರು.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

6 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

8 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

9 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

9 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

9 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

9 hours ago