Featured

ಉಡುಪಿ: ಅಯೋಧ್ಯೆಯಲ್ಲಿ 25 ಸಾವಿರ ಜನರ ವಸತಿ ಸಾಮರ್ಥ್ಯದ ಬೃಹತ್‌ ಯಾತ್ರಿ ಭವನ ನಿರ್ಮಾಣ  : ಪೇಜಾವರ ಶ್ರೀ – Vishwanews24

ಉಡುಪಿ: ಅಯೋಧ್ಯೆಯಲ್ಲಿ 25 ಸಾವಿರ ಜನರ ವಸತಿ ಸಾಮರ್ಥ್ಯದ ಬೃಹತ್‌ ಯಾತ್ರಿ ಭವನ ನಿರ್ಮಾಣ  : ಪೇಜಾವರ ಶ್ರೀ

ಉಡುಪಿ: ಅಯೋಧ್ಯೆ ಮಂದಿರ ನಿರ್ಮಾಣ ಕಾರ್ಯ ವೇಗವಾಗಿ ನಡೆಯುತ್ತಿದ್ದು, ಪ್ರಸ್ತುತ ಗರ್ಭಗುಡಿಯ ಪೀಠದ ಮೇಲೆ ಸ್ತಂಭಗಳ ಜೋಡಣೆ ಮತ್ತು ಗೋಡೆ ನಿರ್ಮಾಣ ನಡೆಯುತ್ತಿದೆ.

ಮುಂದಿನ ಹತ್ತು ದಿನಗಳಲ್ಲಿ ಮೇಲ್ಛಾವಣಿಯ ಶಿಲಾ ಬೀಮ್‌ ಮತ್ತು ಶಿಲಾ ಹೊದಿಕೆಗಳನ್ನು ಅಳವಡಿಸುವ ಕಾರ್ಯ ಆರಂಭವಾಗಲಿದೆ. ಮಂದಿರದ ಲೋಕಾರ್ಪಣೆ ವೇಳೆಗೆ ದೇಶಾದ್ಯಂತದಿಂದ ಆಗಮಿಸುವ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ 25 ಸಾವಿರ ಜನರ ವಸತಿ ಸಾಮರ್ಥ್ಯದ ಬೃಹತ್‌ ಯಾತ್ರಿ ಭವನ ನಿರ್ಮಿಸಲಾಗುತ್ತಿದೆ ಎಂದು ಅಯೋಧ್ಯಾ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ವಿಶ್ವಸ್ತರಾಗಿರುವ ಶ್ರೀ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು.

ಮಂಗಳವಾರ ಅಯೋಧ್ಯೆಗೆ ಭೇಟಿ ನೀಡಿ ರಾಮ ಮಂದಿರ ನಿರ್ಮಾಣ ಕಾರ್ಯ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.

ಉತ್ತಮ ಶಿಲೆಯಿಂದ ವಿಗ್ರಹ ನಿರ್ಮಾಣ
ಮಂದಿರದಲ್ಲಿ ಪ್ರತಿಷ್ಠಾಪಿಸಲಾಗುವ ಶ್ರೀ ರಾಮ, ಲಕ್ಷ್ಮಣ, ಸೀತೆಯ ವಿಗ್ರಹಗಳ ನಿರ್ಮಾಣಕ್ಕಾಗಿ ಕರ್ನಾಟಕದ ಹೆಗ್ಗಡೆ ದೇವನಕೋಟೆ, ಕಾರ್ಕಳ, ತಮಿಳುನಾಡಿನ ಮಹಾಬಲಿಪುರಂ, ರಾಜಸ್ಥಾನ ಹಾಗೂ ನೇಪಾಲಗಳಿಂದ ಶಿಲೆಗಳನ್ನು ತರಲಾಗಿದ್ದು, ಶಿಲ್ಪಿಗಳು ಅವುಗಳ ಪರಿಶೀಲನೆ ನಡೆಸಿ ಉತ್ತಮವಾದವುಗಳನ್ನು ಆಯ್ದುಕೊಂಡು ಪ್ರತಿಮೆಗಳನ್ನು ನಿರ್ಮಿಸಲಾಗುತ್ತದೆ ಎಂದರು.

ಟ್ರಸ್ಟ್‌ ಕಾರ್ಯದರ್ಶಿ ಚಂಪತ್‌ ರಾಯ್‌, ವಿಹಿಂಪ ಮುಖಂಡ ಗೋಪಾಲ್‌, ಮಠದ ಕೃಷ್ಣ ಭಟ್‌, ಅಯೋಧ್ಯೆ ಪೇಜಾವರ ಮಠದ ವ್ಯವಸ್ಥಾಪಕ ಮಹೇಂದ್ರ ದುಬೆ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ – vishwanews24

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…

20 hours ago

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ – vishwanews24

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…

21 hours ago

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ – vishwanews24

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…

21 hours ago

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…

22 hours ago

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ -vishwanews24

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…

22 hours ago

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ -vishwanews24

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…

22 hours ago