ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಪ್ರಮುಖರ ಮಹತ್ವದ ಸಭೆ ನಡೆದಿದ್ದು, ಈ ಸಭೆಯಲ್ಲಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರದಲ್ಲಿ ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ಶಿಲ್ಪಶಾಸ್ತ್ರೋಕ್ತ ರೀತಿಯಲ್ಲಿ ಶ್ರೀರಾಮನ ವಿಗ್ರಹ ನಿರ್ಮಿಸಿ ಪ್ರತಿಷ್ಠಾಪಿಸಲು ನಿರ್ಣಯ ಕೈಗೊಳ್ಳಲಾಗಿದೆ.
ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ್ ದಾಸ್ ಜೀ ಅಧ್ಯಕ್ಷತೆಯಲ್ಲಿ ಹಾಗೂ ಕಾರ್ಯದರ್ಶಿಗಳಾದ ಚಂಪತ್ ರಾಯ್, ಕೋಶಾಧಿಕಾರಿ ಗೋವಿಂದ ಗಿರಿ ಸ್ವಾಮೀಜಿ , ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸೇರಿದಂತೆ ಪ್ರಮುಖರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಸ. 26 ರಿಂದ ಅ.5ರವರೆಗೆ ಉಚ್ಚಿಲ ಮಹಾಲಕ್ಷ್ಮೀ ದಸರಾ – Vishwanews24
ಆರಂಭದಲ್ಲಿ ಮಂದಿರ ನಿರ್ಮಾಣಕ್ಕೆ ಸುಮಾರು 400 ಕೋಟಿ ವೆಚ್ಚ ತಗಲಬಹುದೆಂದು ಅಂದಾಜಿಸಲಾಗಿತ್ತು. ಜಿಎಸ್ಟಿ ವೆಚ್ಚ , ರಾಯಲ್ಟಿ ಮೊದಲಾದ ಅನೇಕ ಕಾರಣಗಳಿಂದ ನಿರ್ಮಾಣ ವೆಚ್ಚ 1,300 ಕೋಟಿ ಆಗಬಹುದೆಂದು ಅಂದಾಜಿಸಲಾಗಿದೆ. ಮಂದಿರಕ್ಕಾಗಿ ದೇಶಾದ್ಯಂತ ಭಕ್ತರು ನೀಡುತ್ತಿರುವ ದೇಣಿಗೆಯೂ ಹರಿದು ಬರುತ್ತಿದೆ. ತಿಂಗಳಿಗೆ ಸುಮಾರು 50 ಲಕ್ಷಕ್ಕಿಂತಲೂ ಅಧಿಕ ದೇಣಿಗೆ ಬರುತ್ತಿದ್ದು ಕೆಲವೊಮ್ಮೆ ಈ ಮೊತ್ತ ಕೋಟಿಗೂ ಮೀರಿದೆ.
ಈ ತನಕದ ಸುಮಾರು 300 ಕೋಟಿ ಖರ್ಚನ್ನು ಭಕ್ತರಿಂದ ಹರಿದು ಬರುತ್ತಿರುವ ದೇಣಿಗೆಯಿಂದಲೇ ನಿರ್ವಹಿಸಲಾಗಿದೆ ಎಂದು ಸಭೆಗೆ ತಿಳಿಸಲಾಯಿತು. ಆರಂಭದ ದೇಣಿಗೆ ಸಂಗ್ರಹ ಅಭಿಯಾನದಿಂದ ಬಂದ ಸಾವಿರ ಕೋಟಿಗೂ ಮೀರಿದ ಮೂಲಧನದ ನಿರ್ವಹಣೆಯ ಮಾಡಬೇಕಾದ ಕುರಿತಾಗಿಯೂ ಸಭೆ ಗಂಭೀರ ಚರ್ಚೆ ನಡೆಸಿತು.
ಪ್ರವೀಣ್ ನೆಟ್ಟಾರು ಕನಸಿನ ಮನೆ ನನಸು ಮಾಡಲು ಕುಟುಂಬಸ್ಥರ ಜತೆ ನಳಿನ್ ಕುಮಾರ್ ಮಾತುಕತೆ – Vishwanews24
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…