ಉಡುಪಿ: ಉತ್ತರ ಪ್ರದೇಶದ ಸರಕಾರ ಅಯೋಧ್ಯೆಯ ಶ್ರೀರಾಮ ಮಂದಿರದ ಭದ್ರತೆಯ ವಿಚಾರಕ್ಕೆ ಸಂಬಂಧಪಟ್ಟಂತೆ ಕಣ್ಗಾವಲು ಇರಿಸಲು ಮಣಿಪಾಲದ ಎಂಐಟಿಯ ಉದ್ಯೋಗಿ, ಪರ್ಕಳದ ನಿವಾಸಿ ಆರ್. ಮನೋಹರ್ ಆವಿಷ್ಕರಣೆ ಮಾಡಿ ನಿರ್ಮಿಸಿದ ದೂರದರ್ಶಕ ಆಯ್ಕೆಯಾಗಿದೆ.
ಸುಮಾರು 50 ದೂರದರ್ಶಕಗಳನ್ನು ಖರೀದಿಸುವ ಆರ್ಡರ್ ಈಗಾಗಲೇ ಇವರಿಗೆ ಆನ್ಲೈನ್ ಮೂಲಕ ಬಂದಿದೆ. ಸದ್ಯ 25 ದೂರದರ್ಶಕಗಳನ್ನು ತಯಾರಿಸಿ ನೀಡಲಾಗುವುದು ಎಂದು ಆರ್.ಮನೋಹರ್ ತಿಳಿಸಿದ್ದಾರೆ.
ಪ್ರಯೋಗಿಕವಾಗಿ ಇವರ ದೂರದರ್ಶಕಕ್ಕೆ ಮಾನ್ಯತೆ ದೊರೆತ್ತಿದ್ದು, ಆರ್.ಮನೋಹರ್ ಟೆಲಿಸ್ಕೋಪನ್ನು ಆವಿಷ್ಕಾರಣೆ ಮಾಡುವಲ್ಲಿ ಸಫಲತೆ ಕಂಡಿದ್ದಾರೆ. ನೇರವಾಗಿ ಪ್ರತಿಬಿಂಬವನ್ನು ನೋಡುವಂತಹ ದೂರದರ್ಶಕವನ್ನು ಆವಿಷ್ಕರಣೆ ಮಾಡಿ ರುವುದರಿಂದ ಇವರಿಗೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪೇಟೆಂಟ್ ಕೂಡ ದೂರದರ್ಶಕಕ್ಕೆ ಸಿಕ್ಕಿದೆ.
ದೂರದರ್ಶಕವನ್ನು ಇನ್ನಷ್ಟು ಸರಳ ರೀತಿಯಲ್ಲಿ ಮತ್ತು ಚಿಕ್ಕದಾದ ಗಾತ್ರಕ್ಕೆ ಮತ್ತು ಅತಿ ದೂರದ ವಸ್ತು ಕಾಣುವಂತೆ ಇನ್ನಷ್ಟು ಅಧ್ಯಯನದಲ್ಲಿ ತೊಡಗಿದ್ದಾರೆ. ಅಯೋಧ್ಯೆಯ ಶ್ರೀರಾಮ ಮಂದಿರದ ಭದ್ರತೆಯ ದೃಷ್ಟಿಯಲ್ಲಿ ಸರ್ಚಿಂಗ್ ನಡೆಸಲು ಮನೋಹರ್ ಅವರ ದೂರದರ್ಶಕ ಆಯ್ಕೆ ಆಗಿರುವುದು ಸ್ಥಳೀಯರಲ್ಲಿಯೂ ಸಂತಸ ತಂದಿದೆ ಎಂದು ಸ್ಥಳೀಯರಾದ ಮೋಹನ್ ದಾಸ ನಾಯಕ್ ಪರ್ಕಳ, ಗಣೇಶ್ ರಾಜ್ ಸರಳೇಬೆಟ್ಟು, ಜಯಶೆಟ್ಟಿ ಬನ್ನಂಜೆ, ರಾಜೇಶ್ ಪ್ರಭು ಪರ್ಕಳ, ಪ್ರಕಾಶ್ ನಾಯ್ಕ್ ಪರ್ಕಳ, ಜಯ ದೀಪ್ ನಾಯಕ್ ತಿಳಿಸಿದ್ದಾರೆ.
ಇವರು ಪರ್ಕಳ ಮತ್ತು ಉಡುಪಿಯಲ್ಲಿ ಕೆಲವು ಆಯ್ದ ಸ್ಥಳಗಳಲ್ಲಿ ಸೂರ್ಯ ಗ್ರಹಣ, ಚಂದ್ರಗ್ರಹಣ, ಶನಿಗ್ರಹ, ಗುರುಗ್ರಹ, ಮಂಗಳ ಗ್ರಹ ಇನ್ನಿತರ ಅನ್ಯಗ್ರಹಗಳನ್ನು ಇವರ ದೂರದರ್ಶಕದ ಮೂಲಕ ಉಚಿತವಾಗಿ ತೋರಿಸಿ ಕೊಟ್ಟಿದ್ದಾರೆ. ಅದೇ ರೀತಿ ಕೆಲವೊಂದು ಶಾಲೆಗಳಿಗೆ ಅವರೇ ತಯಾರಿಸಿದ ದೂರದರ್ಶಕವನ್ನ ಉಚಿತವಾಗಿ ನೀಡಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…