Featured

ಉಡುಪಿ: ಅಯೋಧ್ಯೆ ರಾಮಮಂದಿರ ಕಣ್ಗಾವಲಿಗೆ ಪರ್ಕಳದ ನಿವಾಸಿ ಆರ್. ಮನೋಹರ್ ಆವಿಷ್ಕರಣೆ ಮಾಡಿ ನಿರ್ಮಿಸಿದ ದೂರದರ್ಶಕ ಆಯ್ಕೆ – vishwanews24

ಉಡುಪಿ: ಅಯೋಧ್ಯೆ ರಾಮಮಂದಿರ ಕಣ್ಗಾವಲಿಗೆ ಪರ್ಕಳದ ನಿವಾಸಿ ಆರ್. ಮನೋಹರ್ ಆವಿಷ್ಕರಣೆ ಮಾಡಿ ನಿರ್ಮಿಸಿದ ದೂರದರ್ಶಕ ಆಯ್ಕೆ

ಉಡುಪಿ: ಉತ್ತರ ಪ್ರದೇಶದ ಸರಕಾರ ಅಯೋಧ್ಯೆಯ ಶ್ರೀರಾಮ ಮಂದಿರದ ಭದ್ರತೆಯ ವಿಚಾರಕ್ಕೆ ಸಂಬಂಧಪಟ್ಟಂತೆ ಕಣ್ಗಾವಲು ಇರಿಸಲು ಮಣಿಪಾಲದ ಎಂಐಟಿಯ ಉದ್ಯೋಗಿ, ಪರ್ಕಳದ ನಿವಾಸಿ ಆರ್. ಮನೋಹರ್ ಆವಿಷ್ಕರಣೆ ಮಾಡಿ ನಿರ್ಮಿಸಿದ ದೂರದರ್ಶಕ ಆಯ್ಕೆಯಾಗಿದೆ.

ಸುಮಾರು 50 ದೂರದರ್ಶಕಗಳನ್ನು ಖರೀದಿಸುವ ಆರ್ಡರ್ ಈಗಾಗಲೇ ಇವರಿಗೆ ಆನ್‌ಲೈನ್ ಮೂಲಕ ಬಂದಿದೆ. ಸದ್ಯ 25 ದೂರದರ್ಶಕಗಳನ್ನು ತಯಾರಿಸಿ ನೀಡಲಾಗುವುದು ಎಂದು ಆರ್.ಮನೋಹರ್ ತಿಳಿಸಿದ್ದಾರೆ.

ಪ್ರಯೋಗಿಕವಾಗಿ ಇವರ ದೂರದರ್ಶಕಕ್ಕೆ ಮಾನ್ಯತೆ ದೊರೆತ್ತಿದ್ದು, ಆರ್.ಮನೋಹರ್ ಟೆಲಿಸ್ಕೋಪನ್ನು ಆವಿಷ್ಕಾರಣೆ ಮಾಡುವಲ್ಲಿ ಸಫಲತೆ ಕಂಡಿದ್ದಾರೆ. ನೇರವಾಗಿ ಪ್ರತಿಬಿಂಬವನ್ನು ನೋಡುವಂತಹ ದೂರದರ್ಶಕವನ್ನು ಆವಿಷ್ಕರಣೆ ಮಾಡಿ ರುವುದರಿಂದ ಇವರಿಗೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪೇಟೆಂಟ್ ಕೂಡ ದೂರದರ್ಶಕಕ್ಕೆ ಸಿಕ್ಕಿದೆ.

ದೂರದರ್ಶಕವನ್ನು ಇನ್ನಷ್ಟು ಸರಳ ರೀತಿಯಲ್ಲಿ ಮತ್ತು ಚಿಕ್ಕದಾದ ಗಾತ್ರಕ್ಕೆ ಮತ್ತು ಅತಿ ದೂರದ ವಸ್ತು ಕಾಣುವಂತೆ ಇನ್ನಷ್ಟು ಅಧ್ಯಯನದಲ್ಲಿ ತೊಡಗಿದ್ದಾರೆ. ಅಯೋಧ್ಯೆಯ ಶ್ರೀರಾಮ ಮಂದಿರದ ಭದ್ರತೆಯ ದೃಷ್ಟಿಯಲ್ಲಿ ಸರ್ಚಿಂಗ್ ನಡೆಸಲು ಮನೋಹರ್ ಅವರ ದೂರದರ್ಶಕ ಆಯ್ಕೆ ಆಗಿರುವುದು ಸ್ಥಳೀಯರಲ್ಲಿಯೂ ಸಂತಸ ತಂದಿದೆ ಎಂದು ಸ್ಥಳೀಯರಾದ ಮೋಹನ್ ದಾಸ ನಾಯಕ್ ಪರ್ಕಳ, ಗಣೇಶ್ ರಾಜ್ ಸರಳೇಬೆಟ್ಟು, ಜಯಶೆಟ್ಟಿ ಬನ್ನಂಜೆ, ರಾಜೇಶ್ ಪ್ರಭು ಪರ್ಕಳ, ಪ್ರಕಾಶ್ ನಾಯ್ಕ್ ಪರ್ಕಳ, ಜಯ ದೀಪ್ ನಾಯಕ್ ತಿಳಿಸಿದ್ದಾರೆ.

ಇವರು ಪರ್ಕಳ ಮತ್ತು ಉಡುಪಿಯಲ್ಲಿ ಕೆಲವು ಆಯ್ದ ಸ್ಥಳಗಳಲ್ಲಿ ಸೂರ್ಯ ಗ್ರಹಣ, ಚಂದ್ರಗ್ರಹಣ, ಶನಿಗ್ರಹ, ಗುರುಗ್ರಹ, ಮಂಗಳ ಗ್ರಹ ಇನ್ನಿತರ ಅನ್ಯಗ್ರಹಗಳನ್ನು ಇವರ ದೂರದರ್ಶಕದ ಮೂಲಕ ಉಚಿತವಾಗಿ ತೋರಿಸಿ ಕೊಟ್ಟಿದ್ದಾರೆ. ಅದೇ ರೀತಿ ಕೆಲವೊಂದು ಶಾಲೆಗಳಿಗೆ ಅವರೇ ತಯಾರಿಸಿದ ದೂರದರ್ಶಕವನ್ನ ಉಚಿತವಾಗಿ ನೀಡಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

18 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

21 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

21 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

21 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

21 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

22 hours ago