Featured

ಉಡುಪಿ: ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿಯಲ್ಲಿ ಮುಂದಿನ ಒಂದು ವಾರ ಮಳೆಯ ಮುನ್ಸೂಚನೆ – vishwanews24

ಉಡುಪಿ: ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿಯಲ್ಲಿ ಮುಂದಿನ ಒಂದು ವಾರ ಮಳೆಯ ಮುನ್ಸೂಚನೆ

ಉಡುಪಿ: ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆ ಯಂತೆ ಪಶ್ಚಿಮದ ಅರಬಿಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಒಂದು ವಾರ ಕಾಲ ಸಮುದ್ರ ಪ್ರಕ್ಷುಬ್ದತೆಯಿಂದ ಕೂಡಿರಲಿದ್ದು, ಈ ದಿನಗಳಲ್ಲಿ ಗಂಟೆಗೆ 45ರಿಂದ 55 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಜಿಲ್ಲಾಧಿಕಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಅವಧಿಯಲ್ಲಿ ಸಮುದ್ರದಲ್ಲಿ ಎತ್ತರದ ಅಲೆಗಳು ಏಳಲಿದ್ದು, ದಡವನ್ನು ಅಪ್ಪಳಿಸುವ ಸಾದ್ಯತೆ ಇದೆ. ಈ ಹಿನ್ನೆಲೆ ಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕರು ಹಾಗೂ ಅಧಿಕಾರಗಳಿಗೆ ಕೆಲವೊಂದು ಮುನ್ನೆಚ್ಚರಿಕೆ ಹಾಗೂ ಸೂಚನೆಗಳನ್ನು ನೀಡಿದೆ.

ಸಾರ್ವಜನಿಕರು, ಪ್ರವಾಸಿಗರು, ಮೀನುಗಾರರು ಸಮುದ್ರ ಹಾಗೂ ನದಿಗಳಿಗೆ ಇಳಿಯದಂತೆ ಕಟ್ಟೆಚ್ಚರ ವಹಿಸ ಬೇಕು. ಈಗಾಗಲೇ ಮೀನುಗಾರಿಕೆಗೆ ತೆರಳಿರುವ ಮೀನುಗಾರರು ಸಾಧ್ಯವಿದ್ದಷ್ಟು ಬೇಗ ಸುರಕ್ಷಿತ ದಡವನ್ನು ಸೇರಬೇಕು. ತುರ್ತುಸೇವೆಗೆ ಶುಲ್ಕ ರಹಿತ 1077 ಅಥವಾ ದೂರವಾಣಿ ಸಂಖ್ಯೆ: 0820-2574802ನ್ನು ಸಂಪರ್ಕಿಸುವಂತೆ ಸೂಚನೆ ನೀಡಲಾಗಿದೆ.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

8 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

13 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

13 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

13 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

14 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

14 hours ago