ಉಡುಪಿ : ಜಿಲ್ಲೆಯಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ನಲ್ಲಿ ನಡೆದ, ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಕ್ಟೋಬರ್ 24 ರಿಂದ 31 ರ ವರಗೆ ಕೆ.ಎಸ್.ಆರ್.ಟಿ.ಸಿ ಮತ್ತು ಮೆಸ್ಕಾಂಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು
ಹಮ್ಮಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಅಕ್ಟೋಬರ್ 28 ರಂದು ಬೆಳಗ್ಗೆ 11 ಗಂಟೆಗೆ ಕನ್ನಡದ ಶ್ರೇಷ್ಠತೆಯನ್ನು ಸಾರುವ ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಗೀತೆಗಳನ್ನು ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಹಾಡಲು ಯೋಜನೆ ರೂಪಿಸಿ, ಎಲ್ಲಾ ಶಾಲಾ,ಕಾಲೇಜು,ಹಾಸ್ಟೆಲ್ಗಳಲ್ಲಿ ಈ ಗೀತೆಗಳನ್ನು ಹಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ರಜತಾದ್ರಿಯ ಜಿಲ್ಲಾಡಳಿತ ಸಂಕೀರ್ಣದಲ್ಲಿ ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಸಹ ಕಾರ್ಯಕ್ರಮ ಆಯೋಜನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಜಿಲ್ಲೆಯ ಐತಿಹಾಸಿಕ ಪ್ರದೇಶದಲ್ಲಿ ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಿದ ಅವರು, ಕಾರ್ಕಳದ ಬಾಹುಬಲಿ ಬೆಟ್ಟ ಮತ್ತು ಬೈಂದೂರಿನ ಸೇನೇಶ್ವರ ಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ನವೆಂಬರ್ 1 ರಂದು ಬೆಳಗ್ಗೆ 9 ಗಂಟೆಗೆ ಅಜ್ಜರಕಾಡು ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಅಚರಣೆ ನಡೆಯಲಿದ್ದು, ಕನ್ನಡ ತಾಯಿ ಭುವನೇಶ್ವರಿ ದೇವಿಗೆ ಪೂಜೆ ನಡೆಸಲಾಗುವುದು, ವಿವಿಧ ತಂಡಗಳಿ0ದ ಪಥ ಸಂಚಲನ ನಡೆಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡುವ ಕುರಿತಂತೆ ಆಯ್ಕೆ ಸಮಿತಿಯಲ್ಲಿ ನಿರ್ಧರಿಸಲಾಗುವುದು ಎಂದ ಜಿಲ್ಲಾಧಿಕಾರಿಗಳು , ರಾಜ್ಯೋತ್ಸವ ಆಚರಣೆ ಕುರಿತಂತೆ ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಿದರು. ಎಲ್ಲಾ ಸಮಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…