Featured

ಉಡುಪಿ: ಅರ್ಹ ಕುಟುಂಬಗಳಿಗೆ ಸೂರು ಕಲ್ಪಿಸುವ ಯಶ್ಪಾಲ್ ಸುವರ್ಣರ ಸೇವೆ ಕೂಡಾ ಶ್ರೀ ರಾಮ ದೇವರಿಗೆ ಸಂದ ಸೇವೆ : ಪೇಜಾವರ ಸ್ವಾಮೀಜಿ – vishwanews24

ಉಡುಪಿ: ಅರ್ಹ ಕುಟುಂಬಗಳಿಗೆ ಸೂರು ಕಲ್ಪಿಸುವ ಯಶ್ಪಾಲ್ ಸುವರ್ಣರ ಸೇವೆ ಕೂಡಾ ಶ್ರೀ ರಾಮ ದೇವರಿಗೆ ಸಂದ ಸೇವೆ : ಪೇಜಾವರ ಸ್ವಾಮೀಜಿ

ಶಾಸಕ ಯಶ್ ಪಾಲ್ ಸುವರ್ಣ ರ ಪುಷ್ಪಾನಂದ ಫೌಂಡೇಶನ್ ಮೂಲಕ ಮನೆ ಹಸ್ತಾಂತರ

ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮ ದೇವರಿಗೆ ಮಂದಿರ ನಿರ್ಮಾಣದ ಜೊತೆ ಜೊತೆಗೆ ರಾಮ ರಾಜ್ಯದ ನಿರ್ಮಾಣದ ಕನಸಿನಂತೆ ಅರ್ಹ ಕುಟುಂಬಗಳಿಗೆ ಸೂರು ಕಲ್ಪಿಸುವ ಆಶಯದಲ್ಲಿ ತಮ್ಮ ಪುಷ್ಪಾನಂದ ಫೌಂಡೇಶನ್ ಮೂಲಕ ಸುಮಾರು 12 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಿಸಿದ ಸೇವೆ ಕೂಡಾ ಶ್ರೀರಾಮ ದೇವರಿಗೆ ಸಂದ ಸೇವೆ ಎಂದು ಪೇಜಾವರ ಮಠದ ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಹೇಳಿದರು.

ಮಲ್ಪೆ ವಡಭಾಂಡೇಶ್ವರ ವಾರ್ಡಿನ ಸುಶೀಲಾ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ರವರು ಪುಷ್ಪಾನಂದ ಫೌಂಡೇಶನ್ ಮೂಲಕ ತಮ್ಮ ಹೆತ್ತವರ ಸ್ಮರಣಾರ್ಥ ನಿರ್ಮಿಸಿದ ಮನೆಯ ಹಸ್ತಾಂತರ ನೆರವೇರಿಸಿ ಆಶೀರ್ವಚನ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ಪಾಲ್ ಸುವರ್ಣ ಪೇಜಾವರ ಶ್ರೀಗಳು ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆ ಸುಸಂದರ್ಭದಲ್ಲಿ ಅರ್ಹರಿಗೆ ಸೂರು ಕಲ್ಪಿಸುವ ಸಂಕಲ್ಪಕ್ಕೆ ಪೂರಕವಾಗಿ ಕಳೆದ ರಾಮನವಮಿ ಶುಭದಿನದಂದು ಪೇಜಾವರ ಶ್ರೀಪಾದರು ಶಿಲಾನ್ಯಾಸ ನೆರವೇರಿಸಿದ ಮನೆ ಇಂದು ಸ್ವಾಮೀಜಿಯವರ ಅಮೃತ ಹಸ್ತದಿಂದ ಸುಸಜ್ಜಿತ ಮನೆಯನ್ನು ನಮ್ಮ ಫೌಂಡೇಶನ್ ಮೂಲಕ ನೀಡುತ್ತಿರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿಯೂ ಪುಷ್ಪಾನಂದ ಫೌಂಡೇಶನ್ ಮೂಲಕ ಸಮಾಜಮುಖಿ ಕಾರ್ಯಗಳು ನಿತ್ಯ ನಿರಂತರವಾಗಿ ನಡೆಸುವ ಆಶಯ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾದ ರಜನಿ ಹೆಬ್ಬಾರ್, ನಗರಸಭಾ ಸದಸ್ಯರಾದ ಲಕ್ಷ್ಮೀ ಮಂಜುನಾಥ, ಸುಂದರ ಕಲ್ಮಾಡಿ, ವಿಜಯ ಕೊಡವೂರು, ಬಾಲಕೃಷ್ಣ ಶೆಟ್ಟಿ, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷರಾದ ದಯಾನಂದ ಸುವರ್ಣ, ಕಚ್ಚೂರು ಮಾಲ್ತಿದೇವಿ ದೇವಸ್ಥಾನದ ಗೋಕುಲ್ ದಾಸ್, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಮುಖಂಡರಾದ ಜಯನ್ ಮಲ್ಪೆ, ಶ್ರೀ ದಿನಕರ ಬಾಬು, ಅಜಿತ್ ಕಪ್ಪೆಟ್ಟು, ಮಂಜು ಕೊಳ, ಸನಿಲ್, ಜಗದೀಶ್ ಆಚಾರ್ಯ ಕಪ್ಪೆಟ್ಟು, ಸಂಧ್ಯಾ ರಮೇಶ್, ವಾಸುದೇವ ಸಾಲ್ಯಾನ್, ವನಜಾ ಪುತ್ರನ್, ಹಿಂದೂ ಯುವ ಸೇನೆಯ ಗೌರವಾಧ್ಯಕ್ಷ ಶೇಖರ ಶೆಟ್ಟಿ ಹಿರಿಯಡ್ಕ, ಜಿಲ್ಲಾಧ್ಯಕ್ಷ ಅಜಿತ್ ಕೊಡವೂರು, ನಗರ ಅಧ್ಯಕ್ಷ ಸುನೀಲ್ ನೇಜಾರು ಮೊದಲಾದವರು ಉಪಸ್ಥಿತರಿದ್ದರು.

ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಶಾಸಕರ ಆಪ್ತ ಕಾರ್ಯದರ್ಶಿ ಮಟ್ಟು ಯತೀಶ್ ಕೋಟ್ಯಾನ್ ವಂದಿಸಿದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

6 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

6 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

6 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

7 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

7 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

9 hours ago