ಉಡುಪಿ: ಅಲ್ಪಸಂಖ್ಯಾತ ವರ್ಗದವರ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಮುಂದಿನ ಬಜೆಟ್ನಲ್ಲಿ 500 ಕೋಟಿ
ರೂ. ಗಳನ್ನು ಮೀಸಲಿಡುವಂತೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಕ್ತಾರ್ ಹುಸೇನ್ ಎಫ್ ಪಠಾಣ್ ಹೇಳಿದರು.
ಅವರು ಇಂದು ಮಣಿಪಾಲದ ಜಿಲ್ಲಾ ಅಲ್ಪ ಸಂಖ್ಯಾತರ ಅಭಿವೃದ್ದಿ ನಿಗಮದ ಕಚೇರಿಗೆ ಭೇಟಿ ನೀಡಿ ಮಾತನಾಡಿದರು. ರಾಜ್ಯದಲ್ಲಿನ ಮುಸ್ಲಿಂ, ಕ್ರೆöÊಸ್ತ, ಪಾರ್ಸಿ ಮತ್ತು ಜೈನ ಸಮುದಾಯದವರ ಸಮಗ್ರ ಅಭಿವೃದ್ಧಿಗಾಗಿ ನಿಗಮಕ್ಕೆ ಹೆಚ್ಚಿನ ಅನುದಾನದ ಅಗತ್ಯವಿದ್ದು, ಇದಕ್ಕಾಗಿ 500 ಕೋಟಿ ರೂ. ಗಳನ್ನು ಮೀಸಲಿಡುವಂತೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಿದ್ದು, ಇದರಲ್ಲಿ 200 ಕೋಟಿ ರೂ. ಗಳನ್ನು ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡಲು ಬಳಸಲಾಗುವುದು ಎಂದರು.
ಹೊರದೇಶಗಳಿಗೆ ತೆರಳಿ ವಿದ್ಯಾಭ್ಯಾಸ ಮಾಡುವ ಸಮುದಾಯದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ನೆರವು, ಕೆ.ಎಸ್.ಎಫ್.ಸಿ ಮಾದರಿಯಲ್ಲಿ
ಸಮುದಾಯದ ವ್ಯಾಪಾರಿಗಳಿಗೆ 5-10 ಲಕ್ಷ ರೂ. ವರೆಗಿನ ಸಾಲ ಸೌಲಭ್ಯ, ಮನೆ ನಿರ್ಮಾಣಕ್ಕೆ ಸಾಲ ನೀಡುವ ಕಾರ್ಯಕ್ರಮಗಳನ್ನು ಆರಂಭಿಸಲಾಗುವುದು
ಎಂದರು.
ನಿಗಮದ ಎಲ್ಲಾ ಅಧಿಕಾರಿಗಳು, ಮಸೀದಿ, ದರ್ಗಾ, ಚರ್ಚ್, ಬಸದಿಗಳಿಗೆ ತೆರಳಿ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ನೀಡಬೇಕು. ಅಲ್ಲಿನ ನೋಟೀಸ್
ಬೋರ್ಡ್ಗಳಲ್ಲಿ ಎಲ್ಲಾ ಯೋಜನೆಗಳ ವಿವರಗಳನ್ನು ಅಳಡಿಸಬೇಕು ಹಾಗೂ ಅಲ್ಪಸಂಖ್ಯಾತರು ಇಲಾಖೆಯ ಕುರಿತು ಯಾವುದೇ ಮಾಹಿತಿ ಪಡೆಯಲು ಹಾಗೂ ಸಮಸ್ಯೆಗಳ ಬಗ್ಗೆ ತಿಳಿಸಲು ಆರಂಭಿಸಿರುವ 24*7 ಸಹಾಯವಾಣಿ ಸಂಖ್ಯೆ 8277799990 ಬಗ್ಗೆ ವ್ಯಾಪಕ ಅರಿವು ಮೂಡಿಸಬೇಕು ಮತ್ತು ಇಲಾಖೆಯ
ಯೋಜನೆಗಳನ್ನು ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಸಮುದಾಯದ ಎಲ್ಲಾ ಜನರಿಗೆ ತಲುಪಿಸಬೇಕು ಎಂದರು.
ಉಡುಪಿ ಜಿಲ್ಲೆಯಲ್ಲಿ 2021-22 ರಲ್ಲಿ ಅರಿವು ಯೋಜನೆಯಡಿಯಲ್ಲಿ 30 ಲಕ್ಷ ರೂ. ಗುರಿ ನೀಡಲಾಗಿದೆ. ಶ್ರಮಶಕ್ತಿ, ಕಿರು ಸಾಲ, ಕೋವಿಡ್ ನೆರವು
ಯೋಜನೆಯಡಿ 480 ಜನರಿಗೆ ನೆರವು ನೀಡಲಾಗಿದ್ದು, 25 ಜನರಿಗೆ ಟ್ಯಾಕ್ಸಿ ಖರೀದಿಗೆ ನೆರವು ನೀಡಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಜಿಲ್ಲೆಯ ಫಲಾನುಭವಿಗಳಿಗೆ ಚೆಕ್ಗಳನ್ನು ವಿತರಿಸಲಾಯಿತು.
ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ನಿರ್ದೇಶಕ ಸಿರಾಜುದ್ದೀನ್, ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆ ಅಧಿಕಾರಿ ಭಕ್ತ ಮಾರ್ಕಂಡೇಯ
ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…