ಉಡುಪಿ: ಮಹಾಲಕ್ಷ್ಮೀ ಬ್ಯಾಂಕ್ ಸಾಲ ಮಂಜೂರಾತಿ ಪ್ರಕ್ರಿಯೆ ಬಗ್ಗೆ ಸಹಕಾರ ಇಲಾಖೆಯ ಕಲಂ 64 ರಡಿ ಶಾಸನಬದ್ಧ ವಿಚಾರಣೆ ನಡೆಸುವಂತೆ ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನಿಬಂಧಕರ ಆದೇಶವನ್ನು ಸ್ವಾಗತಿಸಿ, ಇಲಾಖೆಯ ವಿಚಾರಣೆಗೆ ಬದ್ಧರಾಗಿರುವುದಾಗಿ ಮಹಾಲಕ್ಷ್ಮೀ ಬ್ಯಾಂಕ್ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಯಾಂಕಿನ ಮೇಲೆ ಆಧಾರರಹಿತ ಆರೋಪ ಬಂದಾಗಲೇ ಯಾವುದೇ ಉನ್ನತ ಮಟ್ಟದ ತನಿಖೆಗೂ ಸಿದ್ಧವಿದೆ ಎಂದು ಆಡಳಿತ ಮಂಡಳಿ ತಿಳಿಸಿದ್ದು, ಬ್ಯಾಂಕ್ ಇಲಾಖೆಯ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಲಿದೆ.
ಕಲಂ 64 ರಡಿ ವಿಚಾರಣೆಯ ಮೂಲಕ ಆಧಾರರಹಿತ ಆರೋಪದ ಸತ್ಯಾಸತ್ಯತೆಯ ಗೊಂದಲ ನಿವಾರಣೆಯಾಗಲಿದ್ದು, ಬ್ಯಾಂಕಿನ ಪಾರದರ್ಶಕ ಕಾರ್ಯವೈಖರಿಯ ಬಗ್ಗೆ ಗ್ರಾಹಕರು ಮತ್ತು ಸದಸ್ಯರಿಗೆ ನೈಜ ಚಿತ್ರಣ ತಿಳಿಯಲಿದೆ.
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಬೆಳವಣಿಗೆಯನ್ನು ಸಹಿಸದೆ, ಕೆಲವು ಪೂರ್ವಗ್ರಹಪೀಡಿತ ವ್ಯಕ್ತಿಗಳು ಗ್ರಾಹಕರಲ್ಲಿ ಗೊಂದಲ ಸೃಷ್ಟಿಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣ, ಪತ್ರಿಕಾಗೋಷ್ಟಿ ನಡೆಸುತ್ತಾ ಆಧಾರರಹಿತ ಆರೋಪ ಮಾಡುತ್ತಿದ್ದು ಈ ಬಗ್ಗೆ ಈಗಾಗಲೇ ಕಾನೂನು ಕ್ರಮ ಕೈಗೊಳ್ಳಲು ಬ್ಯಾಂಕ್ ಮುಂದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…