Featured

ಉಡುಪಿ : ಅವ್ಯವಹಾರ ಆರೋಪ – ಇಲಾಖೆಯ ವಿಚಾರಣೆಗೆ ಸಂಪೂರ್ಣ ಸಹಕಾರ  : ಮಹಾಲಕ್ಷ್ಮೀ ಬ್ಯಾಂಕ್ – vishwanews24

ಉಡುಪಿ : ಸಹಕಾರ ಇಲಾಖೆಯ ಕಲಂ 64 ಶಾಸನಬದ್ಧ ವಿಚಾರಣೆಗೆ ಬದ್ಧ
: ಮಹಾಲಕ್ಷ್ಮೀ ಬ್ಯಾಂಕ್

ಉಡುಪಿ: ಮಹಾಲಕ್ಷ್ಮೀ ಬ್ಯಾಂಕ್ ಸಾಲ ಮಂಜೂರಾತಿ ಪ್ರಕ್ರಿಯೆ ಬಗ್ಗೆ ಸಹಕಾರ ಇಲಾಖೆಯ ಕಲಂ 64 ರಡಿ ಶಾಸನಬದ್ಧ ವಿಚಾರಣೆ ನಡೆಸುವಂತೆ ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನಿಬಂಧಕರ ಆದೇಶವನ್ನು ಸ್ವಾಗತಿಸಿ, ಇಲಾಖೆಯ ವಿಚಾರಣೆಗೆ ಬದ್ಧರಾಗಿರುವುದಾಗಿ ಮಹಾಲಕ್ಷ್ಮೀ ಬ್ಯಾಂಕ್ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬ್ಯಾಂಕಿನ ಮೇಲೆ ಆಧಾರರಹಿತ ಆರೋಪ ಬಂದಾಗಲೇ ಯಾವುದೇ ಉನ್ನತ ಮಟ್ಟದ ತನಿಖೆಗೂ ಸಿದ್ಧವಿದೆ ಎಂದು ಆಡಳಿತ ಮಂಡಳಿ ತಿಳಿಸಿದ್ದು, ಬ್ಯಾಂಕ್ ಇಲಾಖೆಯ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಲಿದೆ.

ಕಲಂ 64 ರಡಿ ವಿಚಾರಣೆಯ ಮೂಲಕ ಆಧಾರರಹಿತ ಆರೋಪದ ಸತ್ಯಾಸತ್ಯತೆಯ ಗೊಂದಲ ನಿವಾರಣೆಯಾಗಲಿದ್ದು, ಬ್ಯಾಂಕಿನ ಪಾರದರ್ಶಕ ಕಾರ್ಯವೈಖರಿಯ ಬಗ್ಗೆ ಗ್ರಾಹಕರು ಮತ್ತು ಸದಸ್ಯರಿಗೆ ನೈಜ ಚಿತ್ರಣ ತಿಳಿಯಲಿದೆ.

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಬೆಳವಣಿಗೆಯನ್ನು ಸಹಿಸದೆ, ಕೆಲವು ಪೂರ್ವಗ್ರಹಪೀಡಿತ ವ್ಯಕ್ತಿಗಳು ಗ್ರಾಹಕರಲ್ಲಿ ಗೊಂದಲ ಸೃಷ್ಟಿಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣ, ಪತ್ರಿಕಾಗೋಷ್ಟಿ ನಡೆಸುತ್ತಾ ಆಧಾರರಹಿತ ಆರೋಪ ಮಾಡುತ್ತಿದ್ದು ಈ ಬಗ್ಗೆ ಈಗಾಗಲೇ ಕಾನೂನು ಕ್ರಮ ಕೈಗೊಳ್ಳಲು ಬ್ಯಾಂಕ್ ಮುಂದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

14 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

15 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

15 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

15 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

15 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

16 hours ago