ಉಡುಪಿ: ಮಹಾಲಕ್ಷ್ಮೀ ಬ್ಯಾಂಕ್ ಸಾಲ ಮಂಜೂರಾತಿ ಪ್ರಕ್ರಿಯೆ ಬಗ್ಗೆ ಸಹಕಾರ ಇಲಾಖೆಯ ಕಲಂ 64 ರಡಿ ಶಾಸನಬದ್ಧ ವಿಚಾರಣೆ ನಡೆಸುವಂತೆ ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನಿಬಂಧಕರ ಆದೇಶವನ್ನು ಸ್ವಾಗತಿಸಿ, ಇಲಾಖೆಯ ವಿಚಾರಣೆಗೆ ಬದ್ಧರಾಗಿರುವುದಾಗಿ ಮಹಾಲಕ್ಷ್ಮೀ ಬ್ಯಾಂಕ್ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಯಾಂಕಿನ ಮೇಲೆ ಆಧಾರರಹಿತ ಆರೋಪ ಬಂದಾಗಲೇ ಯಾವುದೇ ಉನ್ನತ ಮಟ್ಟದ ತನಿಖೆಗೂ ಸಿದ್ಧವಿದೆ ಎಂದು ಆಡಳಿತ ಮಂಡಳಿ ತಿಳಿಸಿದ್ದು, ಬ್ಯಾಂಕ್ ಇಲಾಖೆಯ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಲಿದೆ.
ಕಲಂ 64 ರಡಿ ವಿಚಾರಣೆಯ ಮೂಲಕ ಆಧಾರರಹಿತ ಆರೋಪದ ಸತ್ಯಾಸತ್ಯತೆಯ ಗೊಂದಲ ನಿವಾರಣೆಯಾಗಲಿದ್ದು, ಬ್ಯಾಂಕಿನ ಪಾರದರ್ಶಕ ಕಾರ್ಯವೈಖರಿಯ ಬಗ್ಗೆ ಗ್ರಾಹಕರು ಮತ್ತು ಸದಸ್ಯರಿಗೆ ನೈಜ ಚಿತ್ರಣ ತಿಳಿಯಲಿದೆ.
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಬೆಳವಣಿಗೆಯನ್ನು ಸಹಿಸದೆ, ಕೆಲವು ಪೂರ್ವಗ್ರಹಪೀಡಿತ ವ್ಯಕ್ತಿಗಳು ಗ್ರಾಹಕರಲ್ಲಿ ಗೊಂದಲ ಸೃಷ್ಟಿಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣ, ಪತ್ರಿಕಾಗೋಷ್ಟಿ ನಡೆಸುತ್ತಾ ಆಧಾರರಹಿತ ಆರೋಪ ಮಾಡುತ್ತಿದ್ದು ಈ ಬಗ್ಗೆ ಈಗಾಗಲೇ ಕಾನೂನು ಕ್ರಮ ಕೈಗೊಳ್ಳಲು ಬ್ಯಾಂಕ್ ಮುಂದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ವಂಚನೆ ಹಾಗೂ ಬ್ಲ್ಯಾಕ್ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…
ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…
ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ ಡಿ.ಕೆ. ಶಿ ಬೆಳಗಾವಿ: ಮುಜರಾಯಿ…
ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…
ಪುತ್ತೂರು: ಕೋಮು ಪ್ರಚೋದನೆ ಆರೋಪ ; 7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು ಪುತ್ತೂರು: ಪುರುಷರಕಟ್ಟೆಯಲ್ಲಿ…
ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ ಮಂಗಳೂರು: ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ…