ಉಡುಪಿ: ಜೀವನದಲ್ಲಿ ಎದುರಾದ ಅಸಹಾಯಕ ಪರಿಸ್ಥಿತಿಯಿಂದಾಗಿ ಭೀಕ್ಷಾಟನೆಯಿಂದ ಉಡುಪಿಯಲ್ಲಿ ಜೀವನ ನಿರ್ವಹಿಸುತ್ತಿದ್ದ ವೃದ್ಧರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಕಾರದಿಂದ, ಉಡುಪಿಯ ಮಲಬಾರ್ ಗೋಲ್ಡ್ ಆಭರಣ ಮಳಿಗೆಯ ಸಿಬ್ಬಂದಿಯವರು ವೃದ್ಧರನ್ನು ಸುರಕ್ಷಿತವಾಗಿ ಊರಾದ ಚೆನ್ನೈಗೆ ರವಾನಿಸಿದರು.
ಪ್ರತಿ ನಿತ್ಯ ಮುಂಜಾನೆ ಮಲಬಾರ್ ಗೋಲ್ಡ್ ಸಂಸ್ಥೆಯು ಪತ್ರಿ ನಿತ್ಯ ಮುಂಜಾನೆ ನಗರದಲ್ಲಿ ನೆಲೆಕಂಡಿರುವ ಅನಾಥರಿಗೆ ಅಸಹಾಯಕರಿಗೆ ಉಪಹಾರದ ಪೊಟ್ಟಣಗಳನ್ನು ವಿತರಿಸುತ್ತಿದೆ. ಆ ಸಮಯದಲ್ಲಿ ವೃದ್ದರು ಆಹಾರದ ಪೊಟ್ಟಣವನ್ನು ಸ್ವೀಕರಿಸುತ್ತಿದ್ದರು. ತನ್ನ ಹೆಸರು ಎಂ.ಪ್ರಭಾವಾಸನ್ ಚೆನ್ನೈಯ ನಿವಾಸಿ, ಅಸಹಾಯಕ ಪರಿಸ್ಥಿತಿಯಲ್ಲಿರುವೆನು ಊರಿಗೆ ಹೋಗಲು ವ್ಯವಸ್ಥೆಗೊಳಿಸುವಂತೆ ಆಹಾರ ಪೊಟ್ಟಣ ವಿತರಣಾ ಸಿಬ್ಬಂದಿಯವರಲ್ಲಿ ಹೇಳಿಕೊಂಡಿದ್ದರು. ವಿಷಯ ತಿಳಿದ ಮಲಬಾರ್ ಗೋಲ್ಡ್ ಮಳಿಗೆಯ ವ್ಯವಸ್ಥಾಪಕರು ಮತ್ತು ಸಿಬ್ಬಂದಿಗಳು ನೆರವಿಗೆ ಬಂದು, ವೃದ್ಧರನ್ನು ಚಿಕಿತ್ಸೆ ಒಳಪಡಿಸಿ, ಊರಿಗೆ ರವಾನಿಸಿದರು.
ಕಾರ್ಯಚರಣೆಯಲ್ಲಿ ಹಫೀಝ್ ರೆಹಮಾನ್ ಶಾಖಾ ಮುಖ್ಯಸ್ಥರು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ, ತಂಝೀಮ್ ಶಿರ್ವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಮಾರ್ಕೆಟಿಂಗ್ ವ್ಯವಸ್ಥಾಪಕರು, ಸಿರಾಜ್ ದ್ದೀನ್ ವೈ ಪ್ರಾದೇಶಿಕ ಸಂಯೋಜಕರು ಕರ್ನಾಟಕ ತನಲ್, ಸಿಂಧೂ ಚೆನ್ನೈ ತನಲ್ ಪ್ರತಿನಿಧಿ ರಿಂಷಾದ್ ಮುಖ್ಯಸ್ಥರು ಪುನರ್ವಸತಿ ಕೇಂದ್ರ ತನಲ್ ಭಾಗಿಯಾಗಿದ್ದರು
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…