ಉಡುಪಿ : ಅಸ್ವಸ್ಥಗೊಂಡ ಯುವತಿ – ಬಸ್ ಅನ್ನೇ ಆಸ್ಪತ್ರೆಗೆ ಕೊಂಡೊಯ್ದ ಚಾಲಕ ಹಾಗೂ ನಿರ್ವಾಹಕ – vishwanews24
ಉಡುಪಿ : ಅಸ್ವಸ್ಥಗೊಂಡ ಯುವತಿ – ಬಸ್ ಅನ್ನೇ ಆಸ್ಪತ್ರೆಗೆ ಕೊಂಡೊಯ್ದ ಚಾಲಕ ಹಾಗೂ ನಿರ್ವಾಹಕ
ಮತ್ತೊಮ್ಮೆ ಮಾನವೀಯತೆ ಮೆರೆದ ಕರಾವಳಿ ಬಸ್ನ ಚಾಲಕ, ನಿರ್ವಾಹಕರು
ಉಡುಪಿ: ಅಸ್ವಸ್ಥಗೊಂಡ ಯುವತಿಗಾಗಿ ಚಾಲಕ ಹಾಗೂ ನಿರ್ವಾಹಕ ಬಸ್ ಅನ್ನೇ ಆಸ್ಪತ್ರೆಗೆ ಕೊಂಡೊಯ್ದ ಘಟನೆ ಉಡುಪಿ ನಗರದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಶಿರ್ವದಿಂದ ಉಡುಪಿಗೆ ಬರುತ್ತಿದ್ದ ನವೀನ್ ಎಂಬ ಬಸ್ನಲ್ಲಿ ಈ ಘಟನೆ ನಡೆದಿದ್ದು, ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಯುವತಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಬಸ್ ಉಡುಪಿಯ ಹಳೆ ತಾಲ್ಲೂಕು ಕಚೇರಿ ಬರುವಾಗ ಯುವತಿ ಅಸ್ವಸ್ಥಳಾಗಿದ್ದು, ಬಸ್ ನಲ್ಲೇ ವಾಂತಿ ಮಾಡಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾಳೆ.
ಆತ್ಮಹತ್ಯೆಗೆ ಶರಣಾದ ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ – vishwanews24
ಬಸ್ ಅನ್ನು ತಕ್ಷಣವೇ ಟಿಎಂಎ ಪೈ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕ್ಕೆ ಚಾಲಕ ಹಾಗೂ ನಿರ್ವಾಹಕ ಕೊಂಡೊಯ್ದಿದ್ದಾರೆ. ಯುವತಿಗೆ ತಕ್ಷಣವೇ ಪ್ರಥಮ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಯುವತಿಯ ಮನೆಯವರಿಗೆ ಮಾಹಿತಿ ನೀಡಿ ಮನೆಯವರು ಬರುವ ತನಕ ಯುವತಿಗೆ ಚಿಕಿತ್ಸೆಗೆ ಬಸ್ ಸಿಬ್ಬಂದಿ ಸಹಕಾರ ನೀಡಿದ್ದಾರೆ. ಇದೀಗ ಬಸ್ ಸಿಬ್ಬಂದಿ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಆತ್ಮಹತ್ಯೆಗೆ ಶರಣಾದ ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ – vishwanews24
