ಉಡುಪಿ: ಅಸ್ವಸ್ಥಗೊಂಡ ಯುವತಿಗಾಗಿ ಚಾಲಕ ಹಾಗೂ ನಿರ್ವಾಹಕ ಬಸ್ ಅನ್ನೇ ಆಸ್ಪತ್ರೆಗೆ ಕೊಂಡೊಯ್ದ ಘಟನೆ ಉಡುಪಿ ನಗರದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಶಿರ್ವದಿಂದ ಉಡುಪಿಗೆ ಬರುತ್ತಿದ್ದ ನವೀನ್ ಎಂಬ ಬಸ್ನಲ್ಲಿ ಈ ಘಟನೆ ನಡೆದಿದ್ದು, ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಯುವತಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಬಸ್ ಉಡುಪಿಯ ಹಳೆ ತಾಲ್ಲೂಕು ಕಚೇರಿ ಬರುವಾಗ ಯುವತಿ ಅಸ್ವಸ್ಥಳಾಗಿದ್ದು, ಬಸ್ ನಲ್ಲೇ ವಾಂತಿ ಮಾಡಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾಳೆ.
ಬಸ್ ಅನ್ನು ತಕ್ಷಣವೇ ಟಿಎಂಎ ಪೈ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕ್ಕೆ ಚಾಲಕ ಹಾಗೂ ನಿರ್ವಾಹಕ ಕೊಂಡೊಯ್ದಿದ್ದಾರೆ. ಯುವತಿಗೆ ತಕ್ಷಣವೇ ಪ್ರಥಮ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಯುವತಿಯ ಮನೆಯವರಿಗೆ ಮಾಹಿತಿ ನೀಡಿ ಮನೆಯವರು ಬರುವ ತನಕ ಯುವತಿಗೆ ಚಿಕಿತ್ಸೆಗೆ ಬಸ್ ಸಿಬ್ಬಂದಿ ಸಹಕಾರ ನೀಡಿದ್ದಾರೆ. ಇದೀಗ ಬಸ್ ಸಿಬ್ಬಂದಿ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಉಳ್ಳಾಲ :ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್; ವಿದ್ಯುತ್ ಪ್ರವಹಿಸಿ ಸಾವು ಉಳ್ಳಾಲ : ಜಿಒಎಸ್…
ಸಚಿವ ಸಂಪುಟ ವಿಸ್ತರಣೆ: ಎಸ್.ಮಲ್ಲಿಕಾರ್ಜುನ್ ಸೇರ್ಪಡೆ ; ಮಂಕಾಳ ವೈದ್ಯ ಹೆಸರು ಕೈಬಿಟ್ಟ ಎಐಸಿಸಿ ಬೆಂಗಳೂರು: ಕರ್ನಾಟಕ ಸಚಿವ ಸಂಪುಟ…
ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ಬಂದ್ ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರಿ ಮತ್ತು ಶಿರಿಬಾಗಿಲು…
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…