Featured

ಉಡುಪಿ: ಅ.1ರಿಂದ ಇಂದ್ರಾಳಿ ಸೇತುವೆ ರಸ್ತೆ ಕಾಮಗಾರಿ; ಘನ ವಾಹನಗಳಿಗೆ ಬದಲಿ ಮಾರ್ಗ :ಜಿಲ್ಲಾಧಿಕಾರಿ – Vishwanews24

ಉಡುಪಿ: ಅ.1ರಿಂದ ಇಂದ್ರಾಳಿ ಸೇತುವೆ ರಸ್ತೆ ಕಾಮಗಾರಿ; ಘನ ವಾಹನಗಳಿಗೆ ಬದಲಿ ಮಾರ್ಗ :ಜಿಲ್ಲಾಧಿಕಾರಿ

ಉಡುಪಿ: ವಾಹನ ಸವಾರರಿಗೆ ತೀವ್ರ ಸಮಸ್ಯೆಯಾಗಿ ಪರಿಣಮಿಸಿದ್ದ ಇಂದ್ರಾಳಿ ಸೇತುವೆ ರಸ್ತೆ (ರಾ. ಹೆ. 169ಎ) ಕಾಮಗಾರಿಗೆ ಕೊನೆಗೂ ಕಾಲ ಕೂಡಿ ಬಂದಿದೆ. ಅ.1ರಿಂದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ತಯಾರಿಗೆ ತಯಾರಿ ನಡೆಸಲಾಗಿದ್ದು, ಈ ಮಾರ್ಗದಲ್ಲಿ ಘನ ವಾಹನ ಸಂಚಾರಕ್ಕೆ ನಿಷೇಧ ಹೊರಡಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಅ.1ರಿಂದ 45 ದಿನಗಳವರೆಗೆ ಕಾರು, ದ್ವೀಚಕ್ರ ವಾಹನ, ಬಸ್ಸು ಹೊರತುಪಡಿಸಿ ಇತರೆ ಘನ ವಾಹನಗಳಿಗೆ (ಮಲ್ಟಿ ಎಕ್ಸೆಲ್‌ ಮಾದರಿಯ ವಾಹನಗಳು) ಪ್ರವೇಶವಿಲ್ಲ .

ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಘನ ವಾಹನಗಳ ಬದಲಿ ಮಾರ್ಗ ಇಂತಿದೆ:

ಕುಂದಾಪುರ ಕಡೆಯಿಂದ- ಅಂಬಾಗಿಲು, ಪೆರಂಪಳ್ಳಿ, ಮಣಿಪಾಲ ರಸ್ತೆ. ಉಡುಪಿಯಿಂದ ಕಲ್ಸಂಕ-ಗುಂಡಿಬೈಲು, ಎ. ವಿ. ಬಾಳಿಗ ಆಸ್ಪತ್ರೆ ಮೂಲಕ ಮಣಿಪಾಲಕ್ಕೆ, ಕಾರ್ಕಳ, ಹಿರಿಯಡ್ಕದಿಂದ ಮಣಿಪಾಲ, ಪೆರಂಪಳ್ಳಿ, ಅಂಬಾಗಿಲು ಮೂಲಕ ಚಲಿಸಬೇಕು.

ಉಡುಪಿ-ಮಣಿಪಾಲ ಸಂಚರಿಸುವ ದ್ವಿಚಕ್ರ ವಾಹನ, ಕಾರು, ಬಸ್ಸು ಇಂದ್ರಾಳಿ ಸೇತುವೆ ಮೇಲೆ ಏಕಮುಖ ನಿರ್ಬಂಧಿತ ರೀತಿಯಲ್ಲಿ ಎಚ್ಚರಿಕೆಯಿಂದ ಚಲಿಸುವಂತೆ ಡಿಸಿ ಪ್ರಕಟನೆ ತಿಳಿಸಿದೆ.

*ಕಾರ್ಕಳ, ಹಿರಿಯಡ್ಕದಿಂದ ಬರುವ ಘನ ವಾಹನಗಳು ಮಣಿಪಾಲ- ಪೆರಂಪಳ್ಳಿ- ಅಂಬಾಗಿಲು ರಸ್ತೆ ಮೂಲಕ ಚಲಿಸಬೇಕು.

ಉಡುಪಿಯಿಂದ ಮಣಿಪಾಲಕ್ಕೆ ತೆರಳುವ ದ್ವಿಚಕ್ರ ವಾಹನ, ಕಾರುಗಳು ಮತ್ತು ಬಸ್ಸುಗಳು ಹಾಲಿ ಇಂದ್ರಾಳಿ ಸೇತುವೆ ಮೇಲೆ ಏಕಮುಖ ನಿರ್ಬಂಧಿತ ರೀತಿಯಲ್ಲಿ ಚಲಿಸಬೇಕು ಎಂದು ಆದೇಶದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮಂಗಳೂರು: ನಿಷೇಧಿತ ಪಿಎಫ್ ಐ, ಸಿಎಫ್ ಐ ಕಚೇರಿಗೆ ಬೀಗ ಹಾಕಿದ ಪೊಲೀಸರು – Vishwanews24

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

3 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

3 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

3 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

18 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

18 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

18 hours ago