ಉಡುಪಿ: ವಾಹನ ಸವಾರರಿಗೆ ತೀವ್ರ ಸಮಸ್ಯೆಯಾಗಿ ಪರಿಣಮಿಸಿದ್ದ ಇಂದ್ರಾಳಿ ಸೇತುವೆ ರಸ್ತೆ (ರಾ. ಹೆ. 169ಎ) ಕಾಮಗಾರಿಗೆ ಕೊನೆಗೂ ಕಾಲ ಕೂಡಿ ಬಂದಿದೆ. ಅ.1ರಿಂದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ತಯಾರಿಗೆ ತಯಾರಿ ನಡೆಸಲಾಗಿದ್ದು, ಈ ಮಾರ್ಗದಲ್ಲಿ ಘನ ವಾಹನ ಸಂಚಾರಕ್ಕೆ ನಿಷೇಧ ಹೊರಡಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಅ.1ರಿಂದ 45 ದಿನಗಳವರೆಗೆ ಕಾರು, ದ್ವೀಚಕ್ರ ವಾಹನ, ಬಸ್ಸು ಹೊರತುಪಡಿಸಿ ಇತರೆ ಘನ ವಾಹನಗಳಿಗೆ (ಮಲ್ಟಿ ಎಕ್ಸೆಲ್ ಮಾದರಿಯ ವಾಹನಗಳು) ಪ್ರವೇಶವಿಲ್ಲ .
ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಘನ ವಾಹನಗಳ ಬದಲಿ ಮಾರ್ಗ ಇಂತಿದೆ:
ಕುಂದಾಪುರ ಕಡೆಯಿಂದ- ಅಂಬಾಗಿಲು, ಪೆರಂಪಳ್ಳಿ, ಮಣಿಪಾಲ ರಸ್ತೆ. ಉಡುಪಿಯಿಂದ ಕಲ್ಸಂಕ-ಗುಂಡಿಬೈಲು, ಎ. ವಿ. ಬಾಳಿಗ ಆಸ್ಪತ್ರೆ ಮೂಲಕ ಮಣಿಪಾಲಕ್ಕೆ, ಕಾರ್ಕಳ, ಹಿರಿಯಡ್ಕದಿಂದ ಮಣಿಪಾಲ, ಪೆರಂಪಳ್ಳಿ, ಅಂಬಾಗಿಲು ಮೂಲಕ ಚಲಿಸಬೇಕು.
ಉಡುಪಿ-ಮಣಿಪಾಲ ಸಂಚರಿಸುವ ದ್ವಿಚಕ್ರ ವಾಹನ, ಕಾರು, ಬಸ್ಸು ಇಂದ್ರಾಳಿ ಸೇತುವೆ ಮೇಲೆ ಏಕಮುಖ ನಿರ್ಬಂಧಿತ ರೀತಿಯಲ್ಲಿ ಎಚ್ಚರಿಕೆಯಿಂದ ಚಲಿಸುವಂತೆ ಡಿಸಿ ಪ್ರಕಟನೆ ತಿಳಿಸಿದೆ.
*ಕಾರ್ಕಳ, ಹಿರಿಯಡ್ಕದಿಂದ ಬರುವ ಘನ ವಾಹನಗಳು ಮಣಿಪಾಲ- ಪೆರಂಪಳ್ಳಿ- ಅಂಬಾಗಿಲು ರಸ್ತೆ ಮೂಲಕ ಚಲಿಸಬೇಕು.
ಉಡುಪಿಯಿಂದ ಮಣಿಪಾಲಕ್ಕೆ ತೆರಳುವ ದ್ವಿಚಕ್ರ ವಾಹನ, ಕಾರುಗಳು ಮತ್ತು ಬಸ್ಸುಗಳು ಹಾಲಿ ಇಂದ್ರಾಳಿ ಸೇತುವೆ ಮೇಲೆ ಏಕಮುಖ ನಿರ್ಬಂಧಿತ ರೀತಿಯಲ್ಲಿ ಚಲಿಸಬೇಕು ಎಂದು ಆದೇಶದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮಂಗಳೂರು: ನಿಷೇಧಿತ ಪಿಎಫ್ ಐ, ಸಿಎಫ್ ಐ ಕಚೇರಿಗೆ ಬೀಗ ಹಾಕಿದ ಪೊಲೀಸರು – Vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…