Featured

ಉಡುಪಿ : ಅ. 24ರಂದು ಬೆಹರೆನ್​ನಲ್ಲಿ ತನ್ನದೇ ದಾಖಲೆ ಮುರಿಯಲಿದ್ದಾಳೆ ತನುಶ್ರೀ ಪಿತ್ರೋಡಿ  – vishwanews24

ಉಡುಪಿ : ಅ. 24ರಂದು ಬೆಹರೆನ್​ನಲ್ಲಿ ತನ್ನದೇ ದಾಖಲೆ ಮುರಿಯಲಿದ್ದಾಳೆ ತನುಶ್ರೀ ಪಿತ್ರೋಡಿ

ಉಡುಪಿ : ಬಹ್ಮನ್ ಕನ್ನಡ ಸಂಘದ ವತಿಯಿಂದ ಯೋಗಪಟು ತನುಶ್ರೀ ಪಿತ್ರೋಡಿ ಅವರಿಂದ 10ನೇ ವಿಶ್ವದಾಖಲೆಗೆ ಪ್ರಯತ್ನ ಕಾರ್ಯಕ್ರಮ ಸೆ.24ರಂದು 10ಗಂಟೆಗೆ ಬಹ್ಮನ್ ಕನ್ನಡ ಸಂಘದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಅಜಿತ್ ಬಂಗೇರ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನುಶ್ರೀ ಒಂದು ಗಂಟೆ ಅವಧಿಯಲ್ಲಿ 300 ಯೋಗಾಸಾನಗಳನ್ನು ಪ್ರದರ್ಶಿಸುವ ಮೂಲಕ ಹೊಸ ಗೋಲ್ಡನ್ ಬುಕ್ ಆಫ್ ವಲ್ಡ್ ರೆರ್ಕಾಡ್ ದಾಖಲೆ ಬರೆಯುವ ಪ್ರಯುತ್ನ ಮಾಡಲಿದ್ದಾರೆ. ಈ ಮೂಲಕ ಇವರು ಮೂರು ವರ್ಷಗಳ ಹಿಂದೆ ತಾನೇ ದಾಖಲಿಸಿದ 45 ನಿಮಿಷಗಳಲ್ಲಿ 245 ಆಸನಗಳ ಪ್ರದರ್ಶನವನ್ನು ಮುರಿಯಲಿದ್ದಾರೆ ಎಂದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಹ್ಮನ್‌ನ ಭಾರತೀಯ ರಾಯಭಾರಿ ಕಚೇರಿಯ ವಿನೋದ್ ಜಾಕೋಬ್ ಭಾಗವಹಿಸಲಿದ್ದಾರೆ. ಪ್ರಸ್ತುತ ಉಡುಪಿ ಸೈಂಟ್ ಸಿಸಿಲೀಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಕಲಿಯುತ್ತಿರುವ 16ರ ಹರೆಯದ ತನುಶ್ರೀ ಈವರೆಗೆ ಯೋಗಾಸನದ ಮೂಲಕ ಎರಡು ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಮತ್ತು ಆರು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಹಾಗೂ ಭರತ ನಾಟ್ಯದಲ್ಲಿ ಒಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ್ದಾರೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ತನುಶ್ರೀ ಅವರ ತಂದೆ ಉದಯ ಕುಮಾರ್, ಗ್ರಾಪಂ ಸದಸ್ಯ ಪ್ರವೀಣ್ ಕುರ್ಕಾಲು ಉಪಸ್ಥಿತರಿದ್ದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

8 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

8 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

8 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

9 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago