ಉಡುಪಿ: ಶ್ರೀ ಕೃಷ್ಣಮಠ ಶ್ರೀ ಪರ್ಯಾಯ ಪುತ್ತಿಗೆ ಮಠದ ಸಹಯೋಗದಲ್ಲಿ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ, ಭಾರತೀಯ ವಿದ್ವತ್ ಪರಿಷತ್ ಆಶ್ರಯದಲ್ಲಿ ಅ.24ರಿಂದ 26ರ ವರೆಗೆ ನಡೆಯಲಿರುವ 51ನೇ ಅಖಿಲ ಭಾರತ ಪ್ರಾಚ್ಯ ವಿದ್ಯಾಸಮ್ಮೇಳನವನ್ನು ಉದ್ಘಾಟಿಸಲಿರುವ ಹರಿದ್ವಾರದ ಪತಂಜಲಿ ಯೋಗ ಪೀಠದ ಸಂಸ್ಥಾಪಕರಾದ ಬಾಬಾ ರಾಮ್ದೇವ್ ಅವರು ಬುಧವಾರ ರಾತ್ರಿ ಉಡುಪಿಗೆ ಆಗಮಿಸಿ, ಶ್ರೀಕೃಷ್ಣ ದೇವರ ದರ್ಶನ ಪಡೆದರು.
ಅ.24ರ ಬೆಳಗ್ಗೆ 5.30ರಿಂದ 7.30ರವರೆಗೆ ರಾಜಾಂಗಣದಲ್ಲಿ ನಡೆಯಲ್ಲಿ ಯೋಗ ಶಿಬಿರದಲ್ಲಿ ಪಾಲ್ಗೊಂಡು, ರಾಜಾಂಗಣದಲ್ಲಿಯೇ ಸಮ್ಮೇಳನದ ಉದ್ಘಾಟನೆ ನೆರವೇರಿಸಲಿದ್ದಾರೆ.
ಅನಂತರ ಶ್ರೀ ಕೃಷ್ಣಮಠದಲ್ಲಿ ವೇದ ಘೋಷಗಳ ನಡುವೆ ಪರ್ಯಾಯ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಬಾಬಾ ರಾಮ್ದೇವ್ ಅವರನ್ನು ಬರಮಾಡಿಕೊಂಡು, ಶ್ರೀ ಕೃಷ್ಣ ದೇವರ ದರ್ಶನ ಮಾಡಿಸಲಾಯಿತು. ಅನಂತರ ಪರ್ಯಾಯ ಶ್ರೀಪಾದರ ಅಪೇಕ್ಷೆಯಂತೆ ಗೀತಾಮಂದಿರಕ್ಕೆ ತೆರಳಿ ಪೊಡವಿಗೊಡೆಯ ಶ್ರೀಕೃಷ್ಣನ ಗೀತಾ ಸಂದೇಶವನ್ನು ಜಗದಗಲ ಸಾರುವ ಹಾಗೂ ಪ್ರಪಂಚದಾದ್ಯಂತ ಇರುವ ಶ್ರೀಕೃಷ್ಣ ಭಕ್ತರಲ್ಲಿ ಧಾರ್ಮಿಕ,ಸಾಂಸ್ಕೃತಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಕೈಗೊಂಡ ವಿವಿಧ ಯೋಜನೆಗಳ ಬಗ್ಗೆ ತಿಳಿದುಕೊಂಡು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಪತಂಜಲಿ ಯೋಗ ಪೀಠದ ಕುಲಪತಿ ಆಚಾರ್ಯ ಬಾಲಕೃಷ್ಣ, ಮಾತಾ ಸಾಧ್ವಿà ದೇವಪ್ರಿಯಾ ದೀದೀಜಿ, ಶ್ರೀಮಠದ ದಿವಾನರಾದ ನಾಗರಾಜ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…