ಉಡುಪಿ,: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬೃಹತ್ ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಹಾಗೂ ಮಾರಾಟ ಮೇಳ ಅ.27ರಂದು ಕೊಡವೂರಿನ ಶಿರಡಿ ಸಾಯಿಬಾಬಾ ಮಂದಿರದಲ್ಲಿ ನಡೆಯಲಿದೆ.
ಸ್ಪರ್ಧೆಯ ಸಂಘಟಕರಾದ ಉಡುಪಿಯ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂನ ಉಪಾಧ್ಯಕ್ಷ ಹಾಗೂ ಸ್ಪರ್ಧೆಯ ಸಂಘಟಕ ವಿಜಯ ಕೊಡವೂರು ಅವರು ಇಂದು ಪ್ರೆಸ್ಕ್ಲಬ್ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಅಯ್ಯಪ್ಪ ಸೇವಾ ಸಮಾಜಂನೊಂದಿಗೆ ಉಡುಪಿ ಜಿಲ್ಲಾ ಮಹಿಳಾ ಘಟಕ, ಎಪಿಎಂಸಿ ರಕ್ಷಣಾ ಸಮಿತಿ ಹಾಗೂ ಶಿರಡಿ ಸಾಯಿಬಾಬಾ ಮಂದಿರ ತೋಟದಮನೆ ಕೊಡವೂರು ಸಹ ಕೈಜೋಡಿಸಿದೆ ಎಂದವರು ಹೇಳಿದರು.
ಗೂಡುದೀಪ ಸ್ಪರ್ಧೆಯು ಅ.27ರಂದು ಬೆಳಗ್ಗೆ 8:30ರಿಂದ ಅಪರಾಹ್ನ 12:30ರವರೆಗೆ ನಡೆಯಲಿದೆ. ಸ್ಪರ್ಧೆಯನ್ನು ಉದ್ಯಮಿ ಡಾ.ಜಿ.ಶಂಕರ್ ಉದ್ಘಾಟಿಸಲಿದ್ದು, ಸಾಸ್ನ ಗೌರವಾಧ್ಯಕ್ಷ ಹರಿಯಪ್ಪ ಕೋಟ್ಯಾನ್, ದಿವಾಕರ್ ಶೆಟ್ಟಿ, ಆನಂದ ಪಿ.ಸುವರ್ಣ, ಸಾಧು ಸಾಲಿಯಾನ್ ಮುಂತಾದವರು ಉಪಸ್ಥಿತರಿರುವರು ಎಂದರು.
ಗೂಡುದೀಪ ಸ್ಪರ್ಧೆಯಲ್ಲಿ ಭಾಗವಹಿಸುವವರು ಸ್ಥಳದಲ್ಲೇ ಹೆಸರು ನೊಂದಾಯಿಸಬಹುದು. ಒಂದು ತಂಡದಲ್ಲಿ ಇಬ್ಬರಿಗೆ ಅವಕಾಶವಿದ್ದು, ಸಾಂಪ್ರದಾಯಿಕ ಗೂಡುದೀಪಕ್ಕೆ ಬೇಕಾದ ತಯಾರಿ ಮಾಡಿಕೊಂಡು ಬರಬಹುದು. ಆದರೆ ಗೂಡುದೀಪ ವನ್ನು ಸ್ಥಳದಲ್ಲೇ ರಚಿಸಬೇಕು ಎಂದು ವಿಜಯ ಕೊಡವೂರು ತಿಳಿಸಿದರು.
ಸ್ಪರ್ಧೆಯು 16ವರ್ಷ ಮೇಲ್ಪಟ್ಟು ಹಾಗೂ 16 ವರ್ಷ ಕೆಳಗಿನವರು ವಿಭಾಗದಲ್ಲಿ ನಡೆಯಲಿದೆ. 16 ವರ್ಷ ಮೇಲಿನ ಸೀನಿಯರ್ ವಿಭಾಗದ ವಿಜೇತರಿಗೆ ಕ್ರಮವಾಗಿ 5,555, 4,444, 3,333 ಹಾಗೂ ಐದು ಮಂದಿಗೆ ತಲಾ 1000ರೂ. ಸಮಾಧಾನಕರ ಬಹುಮಾನವಿದೆ. 16 ವರ್ಷ ಕೆಳಗಿನ ವಿಭಾಗದ ವಿಜೇತರಿಗೆ 4,444, 3,333, 2,222 ಮತ್ತು 5 ಮಂದಿಗೆ ತಲಾ 1000ರೂ. ಸಮಾಧಾನಕರ ಬಹುಮಾನವಿದೆ.
ಈಗಾಗಲೇ 20ಕ್ಕೂ ಅಧಿಕ ಮಂದಿ ಸ್ಪರ್ಧೆಗೆ ಹೆಸರು ನೊಂದಾಯಿಸಿಕೊಂ ಡಿದ್ದಾರೆ. ಪ್ಲಾಸ್ಟಿಕ್ ಅಥವಾ ಥರ್ಮಾಕೋಲ್ ಬಳಕೆ ಮಾಡುವಂತಿಲ್ಲ ಎಂದ ಅವರು, ಸಾಂಪ್ರದಾಯಿಕ ಗೂಡುದೀಪ ತಯಾರಿಕೆಯನ್ನು ಮತ್ತೆ ಉತ್ತೇಜಿಸಲು ಇದನ್ನು ಆಯೋಜಿಸಲಾಗುತ್ತಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ರಾಧಾಕೃಷ್ಣ ಮೆಂಡನ್, ಜಿಲ್ಲಾ ಮಹಿಳಾ ಸಾಸ್ನ ಅಧ್ಯಕ್ಷೆ ತಾರಾ ಯು.ಆಚಾರ್ಯ, ಪ್ರದಾನ ಕಾರ್ಯದರ್ಶಿ ರಂಜಿತ್ ಶೆಟ್ಟಿ ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…