ಉಡುಪಿ: ಎಲ್ಲಾ ಖಾಸಗಿ ಬಸ್ ಗಳು ಬಾಗಿಲುಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಹಾಗೂ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಬಸ್ ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.
ಉಡುಪಿ ನಗರ ವ್ಯಾಪ್ತಿಯಲ್ಲಿ ಸಂಚರಿಸುವ ಖಾಸಗಿ ಬಸ್ ಮಾಲಕರ ಸಭೆಯು ಮಲ್ಪೆ ವೃತ್ತ ನಿರೀಕ್ಷಕರ ಕಛೇರಿಯಲ್ಲಿ ನಡೆಯಿತು. ಈ ಸಭೆಯಲ್ಲಿ ವಿವಿಧ ಖಾಸಗಿ ಬಸ್ ಮಾಲೀಕರು ಮತ್ತು ವ್ಯವಸ್ಥಾಪಕರು ಭಾಗವಹಿಸಿದ್ದರು.
ಈ ಸಭೆಯಲ್ಲಿ ಅಕ್ಟೋಬರ್ 31ರೊಳಗೆ ಎಲ್ಲಾ ಖಾಸಗಿ ಬಸ್ಗಳು ಬಾಗಿಲುಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಯಾವುದೇ ಸಂದರ್ಭದಲ್ಲೂ ಪ್ರಯಾಣಿಕರು ಫುಟ್ಬೋರ್ಡ್ಗಳಲ್ಲಿ ಪ್ರಯಾಣಿಸಲು ಅನುಮತಿ ನೀಡಬಾರದು. ಹಾಗೂ ಹೆಚ್ಚುವರಿಯಾಗಿ, ಬಸ್ಗಳಲ್ಲಿ ಅಳವಡಿಸಲಾಗಿರುವ ಗಟ್ಟಿಯಾದ ಹಾರ್ನ್ಗಳನ್ನು ತೆಗೆದುಹಾಕಬೇಕು ಎಂದು ಆದೇಶಿಸಲಾಯಿತು. ಜೊತೆಗೆ ಬಸ್ ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸದಂತೆ ಚಾಲಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.
ಮಹಿಳೆಯರು ಮತ್ತು ಮಕ್ಕಳೊಂದಿಗೆ ಗೌರವಯುತವಾಗಿ ವರ್ತಿಸುವಂತೆ ಬಸ್ ಚಾಲಕರು ಮತ್ತು ನಿರ್ವಾಹಕರುಗಳಿಗೆ ಸೂಚನೆ ನೀಡಲಾಯಿತು. ಹಾಗೂ ಎಲ್ಲರೂ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶಿಸಲಾಯಿತು.
ಸಭೆಯಲ್ಲಿ ಉಡುಪಿ ಡಿವೈಎಸ್ಪಿ ಡಿ.ಟಿ.ಪ್ರಭು, ಪ್ರೊಬೇಷನರಿ ಡಿವೈಎಸ್ಪಿ ಗೀತಾ ಪಾಟೀಲ್, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್.ಪಿ.ನಾಯ್ಕ್, ಮೋಟಾರು ವಾಹನ ನಿರೀಕ್ಷಕ ಮಾರುತಿ ನಾಯ್ಕ್, ಮಲ್ಪೆ ವೃತ್ತ ನಿರೀಕ್ಷಕ ಮಂಜುನಾಥ ಎಂ, ಉಡುಪಿ ಸಂಚಾರ ಠಾಣೆ ಪಿಎಸ್ಐ ಸುದರ್ಶನ ದೊಡ್ಡಮನಿ ಉಪಸ್ಥಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…