ಉಡುಪಿ: ಜಿಲ್ಲೆಯ 155 ಗ್ರಾಮ ಪಂಚಾಯತ್ಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪಿಡಿಓ ಸೇರಿದಂತೆ ಸಮಸ್ತ ನೌಕರರು ರಾಜ್ಯ ಮಟ್ಟದ ಮುಷ್ಕರದಲ್ಲಿ ಪಾಲ್ಗೊಳ್ಳಲಿರುವುದರಿಂದ ಅ.4ರಿಂದ ಜಿಲ್ಲೆಯ ಯಾವುದೇ ಗ್ರಾಪಂನಲ್ಲಿ ಅನಿರ್ಧಿಷ್ಟಾವಧಿ ಯವರಿಗೆ ಯಾವುದೇ ಸೇವೆ ಲಭ್ಯವಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಉಡುಪಿ ಜಿಲ್ಲಾ ಅಧ್ಯಕ್ಷ ಹಾಗೂ ರಾಜ್ಯ ವಿಭಾಗೀಯ ಅಧ್ಯಕ್ಷ ಮಂಜುನಾಥ ಪಿ.ಶೆಟ್ಟಿ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸ್ಥಳೀಯ ಸಂಸ್ಥೆಯಾದ ಗ್ರಾಪಂಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹಾಗೂ ಗ್ರಾಪಂಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಸ್ತ ನೌಕರರು ಅ.4ರಿಂದ ಸರಕಾರ ಹಾಗೂ ಇಲಾಖೆಯ ಧೋರಣೆಯನ್ನು ಖಂಡಿಸಿ ಮತ್ತು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯಲಿರುವ ಧರಣಿ ಮುಷ್ಕರದಲ್ಲಿ ಪಾಲ್ಗೊಳ್ಳಲಿರುವುದರಿಂದ ಗ್ರಾಪಂಗಳಲ್ಲಿ ಯಾವುದೇ ಕೆಲಸ ನಡೆಯುವುದಿಲ್ಲ ಎಂದರು.
ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ನೇತೃತ್ವದಲ್ಲಿ 11 ವೃಂದ ಸಂಘಗಳು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಧರಣಿ ಮುಷ್ಕರವನ್ನು ಆಯೋಜಿಸಲಿದ್ದು, ಇಡೀ ರಾಜ್ಯದ ಎಲ್ಲಾ ಗ್ರಾಪಂ ಸೇವೆಗಳನ್ನು ನಿಲ್ಲಿಸಿ ಅನಿರ್ಧಿಷ್ಟಾವಧಿ ಹೋರಾಟವನ್ನು ನಡೆಸಲಿವೆ ಎಂದರು.
ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಸಿದ್ಧೇಶ್, ಶಿವರಾಜ್ ಎಂ, ಪ್ರಶಾಂತ್ ಕೆ., ರಮೇಶ್ ಕೆ.ನಾಯಕ್, ಸಂತೋಷ ಜೋಗಿ ಮುಂತಾದವರು ಉಪಸ್ಥಿತರಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…