ಉಡುಪಿ : ನಾಳೆಯಿಂದ ರಾಜ್ಯಾದ್ಯಂತ ಚಿತ್ರಮಂದಿರಗಳು ತೆರೆಯಲು ಅನುಮತಿ ನೀಡಿದ್ದು, ಚಿತ್ರಗಳು ಪ್ರದರ್ಶನ ಕಾಣಲಿದೆ. ಆದರೆ, ಕರಾವಳಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಮಾತ್ರ ಇನ್ನೂ ಒಂದು ವಾರಗಳ ಕಾಲ ಯಾವುದೇ ಚಿತ್ರ ಮಂದಿರಗಳು ತೆರೆಯುವುದಿಲ್ಲ.
ಪಿತೃಪಕ್ಷ ಇರುವುದರಿಂದ ಥಿಯೇಟರ್ಗಳನ್ನು ಮತ್ತೆ ಓಪನ್ ಮಾಡಲು ಆಡಳಿತ ಮಂಡಳಿ ಒಪ್ಪುತ್ತಿಲ್ಲ. ಆದ್ದರಿಂದ ಉಡುಪಿ ಜಿಲ್ಲೆಯಲ್ಲಿ ಅ.1 ರಂದು ಯಾವುದೇ ಚಿತ್ರಮಂದಿರಗಳನ್ನು ಓಪನ್ ಮಾಡದೆ ಇರಲು ತೀರ್ಮಾನಿಸಲಾಗಿದೆ. ಮಲ್ಟಿಪ್ಲೆಕ್ಸ್ ಗಳು ಈಗಾಗಲೇ ಆರಂಭವಾಗಿದ್ದು, ಸಿಂಗಲ್ ಸ್ಕ್ರೀನ್ ಥಿಯೇಟರ್ಗಳನ್ನು ಒಂದು ವಾರದ ನಂತರ ಓಪನ್ ಮಾಡಲು ತೀರ್ಮಾನಿಸಲಾಗಿದೆ. ಅದರಂತೆ ಉಡುಪಿಯ ಕಲ್ಪನಾ, ಅಲಂಕಾರ, ಆಶೀರ್ವಾದ್ ಸೇರಿದಂತೆ ಕಾರ್ಕಳ ಮತ್ತು ಕುಂದಾಪುರ ತಾಲೂಕಿನ ಥಿಯೇಟರ್ಗಳು ಅಕ್ಟೋಬರ್ ಎಂಟರ ನಂತರ ತೆರೆದುಕೊಳ್ಳಲಿವೆ.
ಅಕ್ಟೋಬರ್ ಮೊದಲ ವಾರದಲ್ಲಿ ಪಿತೃಪಕ್ಷ ಇರುವುದರಿಂದ ಶುಭ ಕಾರ್ಯಗಳನ್ನು ಪಿತೃಪಕ್ಷದಲ್ಲಿ ಮಾಡೋದಿಲ್ಲ. 8 ನೇ ತಾರೀಖಿನಿಂದ ಥಿಯೇಟರ್ಗಳು ಓಪನ್ ಮಾಡಬೇಕು ಅಂದ್ರೆ ಸುಮಾರು 30 ಸಾವಿರ ರೂಪಾಯಿ ಖರ್ಚು ಇದೆ. 5 ತಿಂಗಳಿಂದ ಥಿಯೇಟರ್ ಬಂದ್ ಇರುವುದರಿಂದ ಸೀಟುಗಳು ಕಾರ್ಪೆಟ್ ಗಳು, ಹಾಲ್, ಜಗಲಿ ಸ್ಕ್ರೀನ್ ಸೇರಿದಂತೆ ಥಿಯೇಟರ್ರೊಳಗೆ ಸಂಪೂರ್ಣ ಶುಚಿತ್ವ ಮಾಡಬೇಕಾಗಿದೆ. ಕೊರೊನಾ ಮೊದಲ ಅಲೆಯ ಸಂದರ್ಭ 11 ತಿಂಗಳು ಥಿಯೇಟರ್ ಓಪನ್ ಆಗಿರಲಿಲ್ಲ ಈ ಸಂದರ್ಭದಲ್ಲಿ ಎಲ್ಲಾ ಚಿತ್ರಮಂದಿರಗಳಿಗೆ 40 ಸಾವಿರ ರುಪಾಯಿ ಖರ್ಚಾಗಿತ್ತು.
ಅಕ್ಟೋಬರ್ 1ಕ್ಕೆ ಯಾವುದು ದೊಡ್ಡ ಬಜೆಟ್ ನ ಚಿತ್ರಗಳು, ದೊಡ್ಡ ಸ್ಟಾರ್ ಕಾಸ್ಟ ಚಿತ್ರಗಳು ರಿಲೀಸ್ ಇಲ್ಲ. ಪಿತೃಪಕ್ಷ ಈಗ ನಡೆಯುತ್ತಿದೆ. ಮಹಾಲಯ ಅಮಾವಾಸ್ಯೆ ನಂತರ ಒಳ್ಳೆ ದಿನಗಳು ಇರುವುದರಿಂದ ಆನಂತರ ಥಿಯೇಟರ್ಗಳನ್ನು ಓಪನ್ ಮಾಡುತ್ತೇವೆ. ಅನಾದಿಕಾಲದಿಂದ ಜನ ನಂಬಿಕೊಂಡು ಬಂದಿರುವುದರಿಂದ ದಿನಗಳು ಒಳ್ಳೆಯದಲ್ಲ ಎಂಬ ನಂಬಿಕೆ ನಮ್ಮಲ್ಲಿದೆ. ಯಾವುದೇ ಸಮಸ್ಯೆಗಳು ಆಗದಿರಲಿ, ಒಳ್ಳೆ ಬ್ಯುಸಿನೆಸ್ ಆಗಲಿ ಎಂಬ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ವಿ.ಎಸ್ ಹೊಳ್ಳ ಅವರು ಮಾಹಿತಿ ನೀಡಿದ್ದಾರೆ.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…