Featured

ಉಡುಪಿ : ಅ.8 ರಿಂದ ಜಿಲ್ಲೆಯಲ್ಲಿ ಥಿಯೇಟರ್‍ಗಳು ಓಪನ್ -Vishwanews24

ಉಡುಪಿ : ಅ.8 ರಿಂದ ಜಿಲ್ಲೆಯಲ್ಲಿ ಥಿಯೇಟರ್‍ಗಳು ಓಪನ್ -Vishwanews24

ಉಡುಪಿ : ನಾಳೆಯಿಂದ ರಾಜ್ಯಾದ್ಯಂತ ಚಿತ್ರಮಂದಿರಗಳು ತೆರೆಯಲು ಅನುಮತಿ ನೀಡಿದ್ದು, ಚಿತ್ರಗಳು ಪ್ರದರ್ಶನ ಕಾಣಲಿದೆ. ಆದರೆ, ಕರಾವಳಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಮಾತ್ರ ಇನ್ನೂ ಒಂದು ವಾರಗಳ ಕಾಲ ಯಾವುದೇ ಚಿತ್ರ ಮಂದಿರಗಳು ತೆರೆಯುವುದಿಲ್ಲ.

ಪಿತೃಪಕ್ಷ ಇರುವುದರಿಂದ ಥಿಯೇಟರ್‍ಗಳನ್ನು ಮತ್ತೆ ಓಪನ್ ಮಾಡಲು ಆಡಳಿತ ಮಂಡಳಿ ಒಪ್ಪುತ್ತಿಲ್ಲ. ಆದ್ದರಿಂದ ಉಡುಪಿ ಜಿಲ್ಲೆಯಲ್ಲಿ ಅ.1 ರಂದು ಯಾವುದೇ ಚಿತ್ರಮಂದಿರಗಳನ್ನು ಓಪನ್ ಮಾಡದೆ ಇರಲು ತೀರ್ಮಾನಿಸಲಾಗಿದೆ. ಮಲ್ಟಿಪ್ಲೆಕ್ಸ್ ಗಳು ಈಗಾಗಲೇ ಆರಂಭವಾಗಿದ್ದು, ಸಿಂಗಲ್ ಸ್ಕ್ರೀನ್ ಥಿಯೇಟರ್‍ಗಳನ್ನು ಒಂದು ವಾರದ ನಂತರ ಓಪನ್ ಮಾಡಲು ತೀರ್ಮಾನಿಸಲಾಗಿದೆ. ಅದರಂತೆ ಉಡುಪಿಯ ಕಲ್ಪನಾ, ಅಲಂಕಾರ, ಆಶೀರ್ವಾದ್ ಸೇರಿದಂತೆ ಕಾರ್ಕಳ ಮತ್ತು ಕುಂದಾಪುರ ತಾಲೂಕಿನ ಥಿಯೇಟರ್‍ಗಳು ಅಕ್ಟೋಬರ್ ಎಂಟರ ನಂತರ ತೆರೆದುಕೊಳ್ಳಲಿವೆ.

ಅಕ್ಟೋಬರ್ ಮೊದಲ ವಾರದಲ್ಲಿ ಪಿತೃಪಕ್ಷ ಇರುವುದರಿಂದ ಶುಭ ಕಾರ್ಯಗಳನ್ನು ಪಿತೃಪಕ್ಷದಲ್ಲಿ ಮಾಡೋದಿಲ್ಲ. 8 ನೇ ತಾರೀಖಿನಿಂದ ಥಿಯೇಟರ್‍ಗಳು ಓಪನ್ ಮಾಡಬೇಕು ಅಂದ್ರೆ ಸುಮಾರು 30 ಸಾವಿರ ರೂಪಾಯಿ ಖರ್ಚು ಇದೆ. 5 ತಿಂಗಳಿಂದ ಥಿಯೇಟರ್ ಬಂದ್ ಇರುವುದರಿಂದ ಸೀಟುಗಳು ಕಾರ್ಪೆಟ್ ಗಳು, ಹಾಲ್, ಜಗಲಿ ಸ್ಕ್ರೀನ್ ಸೇರಿದಂತೆ ಥಿಯೇಟರ್‍ರೊಳಗೆ ಸಂಪೂರ್ಣ ಶುಚಿತ್ವ ಮಾಡಬೇಕಾಗಿದೆ. ಕೊರೊನಾ ಮೊದಲ ಅಲೆಯ ಸಂದರ್ಭ 11 ತಿಂಗಳು ಥಿಯೇಟರ್ ಓಪನ್ ಆಗಿರಲಿಲ್ಲ ಈ ಸಂದರ್ಭದಲ್ಲಿ ಎಲ್ಲಾ ಚಿತ್ರಮಂದಿರಗಳಿಗೆ 40 ಸಾವಿರ ರುಪಾಯಿ ಖರ್ಚಾಗಿತ್ತು.

ಅಕ್ಟೋಬರ್ 1ಕ್ಕೆ ಯಾವುದು ದೊಡ್ಡ ಬಜೆಟ್ ನ ಚಿತ್ರಗಳು, ದೊಡ್ಡ ಸ್ಟಾರ್ ಕಾಸ್ಟ ಚಿತ್ರಗಳು ರಿಲೀಸ್ ಇಲ್ಲ. ಪಿತೃಪಕ್ಷ ಈಗ ನಡೆಯುತ್ತಿದೆ. ಮಹಾಲಯ ಅಮಾವಾಸ್ಯೆ ನಂತರ ಒಳ್ಳೆ ದಿನಗಳು ಇರುವುದರಿಂದ ಆನಂತರ ಥಿಯೇಟರ್‍ಗಳನ್ನು ಓಪನ್ ಮಾಡುತ್ತೇವೆ. ಅನಾದಿಕಾಲದಿಂದ ಜನ ನಂಬಿಕೊಂಡು ಬಂದಿರುವುದರಿಂದ ದಿನಗಳು ಒಳ್ಳೆಯದಲ್ಲ ಎಂಬ ನಂಬಿಕೆ ನಮ್ಮಲ್ಲಿದೆ. ಯಾವುದೇ ಸಮಸ್ಯೆಗಳು ಆಗದಿರಲಿ, ಒಳ್ಳೆ ಬ್ಯುಸಿನೆಸ್ ಆಗಲಿ ಎಂಬ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ವಿ.ಎಸ್ ಹೊಳ್ಳ ಅವರು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

21 minutes ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

2 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

2 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

3 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

3 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

3 hours ago