ಉಡುಪಿ : ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಆಗಸ್ಟ್ 12 ರಂದು ಜಿಲ್ಲೆಗೆ ಭೇಟಿ ನೀಡುತ್ತಿದ್ದು , ಈ ಕುರಿತಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಪೂರ್ವಭಾವಿ ಸಭೆಯು ಇಂದು ಜಿಲ್ಲಾದಿಕಾರಿ ಕಚೇರಿಯಲ್ಲಿ ನಡೆಯಿತು.
ಮಾನ್ಯ ಮುಖ್ಯಮಂತ್ರಿಗಳ ಸಭೆಗೆ ಜಿಲ್ಲೆಯ ಪ್ರಸಕ್ತ ಕೋವಿಡ್ ಪರಿಸ್ಥಿತಿಯ ಕುರಿತು ಸಮಗ್ರ ವರದಿಯನ್ನು ಸಿದ್ದಪಡಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಪ್ರಾಕೃತಿಕ ವಿಕೋಪ ಪರಿಸ್ಥಿತಿಯ ಕುರಿತಂತೆ ವರದಿಯನ್ನು ಸಿದ್ದಪಡಿಸುವಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್, ಕೃಷಿ, ತೋಟಗಾರಿಕೆ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬAದಿಸಿದ ಎಲ್ಲಾ ಮಾಹಿತಿಯನ್ನು ಸಿದ್ದಪಡಿಸಿಟ್ಟುಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ ಜಿ.ಜಗಧೀಶ್, ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಬಾಕಿ ಇರುವ ಪ್ರಮುಖ ಸಮಸ್ಯೆಗಳ ಕುರಿತಂತೆ ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು,ಕುಂದಾಪುರ ಉಪ ವಿಬಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…