ಉಡುಪಿ

ಉಡುಪಿ : ಆಗಸ್ಟ್ 14 ರಂದು ಮೇಘಾ ಲೋಕ್ ಅದಾಲತ್ – Vishwanews24

ಉಡುಪಿ : ಆಗಸ್ಟ್ 14 ರಂದು ಮೇಘಾ ಲೋಕ್ ಅದಾಲತ್ – Vishwanews24

ಉಡುಪಿ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣಗಳಲ್ಲಿ ಆಗಸ್ಟ್ 14 ರಂದು ಮೇಘಾ ಲೋಕ್ ಅದಾಲತ್‌ನ್ನು ಅಯೋಜಿಸಲಾಗುವುದು.

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದ್ದು, ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಎಂ.ಎA.ಡಿ.ಆರ್. ಪ್ರಕರಣ, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್/ಸಾಲದ ವಸೂಲಾತಿ ಪ್ರಕರಣಗಳು, ಮೋಟಾರು/ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬAಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ/ಕುಟುಂಬ ನ್ಯಾಯಾಲಯ ಪ್ರಕರಣಗಳು (ವಿಚ್ಛೇದನೆಯನ್ನು ಹೊರತುಪಡಿಸಿ), ಭೂ-ಸ್ವಾಧೀನ ಪರಿಹಾರ ಪ್ರಕರಣಗಳು, ಭೂ-ಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬAಧಿಸಿದ ಸೇವಾ ಪ್ರಕರಣಗಳು, ಪಿಂಚಣಿ ಪ್ರಕರಣಗಳು ಹಾಗೂ ಸಿವಿಲ್ ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ನ್ಯಾಯಾಲಯಗಳಲ್ಲಿ ಉಭಯಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೊ.ನಂ: 9480898702 ಅನ್ನು ಸಂಪರ್ಕಿಸುವoತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜೆ.ಎನ್. ಸುಬ್ರಮಣ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ – vishwanews24

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್‌: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…

50 minutes ago

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ – vishwanews24

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…

60 minutes ago

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ – vishwanews24

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…

1 hour ago

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು : ಯತೀಂದ್ರ ಸಿದ್ದರಾಮಯ್ಯ – vishwanews24

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…

1 hour ago

ದಕ್ಷಿಣ ಕನ್ನಡ ಜಿಲ್ಲೆ: 87 ಎಚ್1ಎನ್1 ಪ್ರಕರಣ: ಮುಂಜಾಗ್ರತೆ ಅವಶ್ಯ: ಡಿಎಚ್‌ಒ – vishwanews24

ದಕ್ಷಿಣ ಕನ್ನಡ ಜಿಲ್ಲೆ: 87 ಎಚ್1ಎನ್1 ಪ್ರಕರಣ: ಮುಂಜಾಗ್ರತೆ ಅವಶ್ಯ: ಡಿಎಚ್‌ಒ ಮಂಗಳೂರು: ದ.ಕ. ಜಿಲ್ಲೆಯಲ್ಲಿ ಎಚ್1ಎನ್1 ನಿಯಂ ತ್ರಣದಲ್ಲಿದ್ದು,…

1 hour ago

ನವೆಂಬರ್ ಮೊದಲ ವಾರದಲ್ಲಿ ಉಡುಪಿ ನಗರಕ್ಕೆ ಪೈಪ್‌ಲೈನ್ ಮೂಲಕ ಮನೆ ಮನೆಗೆ ಗ್ಯಾಸ್ ಪೂರೈಕೆ – vishwanews24

ನವೆಂಬರ್ ಮೊದಲ ವಾರದಲ್ಲಿ ಪೈಪ್‌ಲೈನ್ ಮೂಲಕ ಮನೆ ಮನೆಗೆ ಗ್ಯಾಸ್ ಪೂರೈಕೆ ಮಣಿಪಾಲ: ನವೆಂಬರ್ ಮೊದಲ ವಾರದಲ್ಲಿ ಪೈಪ್‌ಲೈನ್ ಮೂಲಕ…

2 hours ago