ಉಡುಪಿ: ನೂತನ ಕೇಂದ್ರ ಸಚಿವರನ್ನು ಪರಿಚಯಿಸುವ ಮತ್ತು ಸರಕಾರದ ವಿವಿಧ ಜನಪರ ಯೋಜನೆಗಳನ್ನು ಪ್ರಚಲಿತಗೊಳಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಜನಾಶೀರ್ವಾದ ಯಾತ್ರೆ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ.ದೇಶದಲ್ಲಿ ಒಟ್ಟು 160 ದಿನ ವಿವಿಧ ತಂಡಗಳು ಪ್ರವಾಸ ಮಾಡಲಿವೆ. ಕೇಂದ್ರ ಸರಕಾರವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅನುಷ್ಠಾನಗೊಳಿಸಿರುವ ಯೋಜನೆಗಳು, ರೈತರ ಆದಾಯ ದ್ವಿಗುಣ, ದೀನದಲಿತರು, ಬಡವರ ಅಭ್ಯುದಯಕ್ಕಾಗಿ ಕೈಗೊಂಡ ಕಾರ್ಯಕ್ರಮಗಳನ್ನು ಪರಿಚಯಿಸಲಾಗುವುದು.ಉಡುಪಿ ಜಿಲ್ಲೆಗೆ ಅಗಸ್ಟ್ 18ರಂದು ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರ ನೇತೃತ್ವದಲ್ಲಿ ಆಗಮಿಸುವ ಜನಾಶೀರ್ವಾದ ಯಾತ್ರೆಯನ್ನು ಜಿಲ್ಲಾ ಬಿಜೆಪಿ ವತಿಯಿಂದ ಹೆಬ್ರಿಯಲ್ಲಿ ಸ್ವಾಗತಿಸಲಾಗುವುದು.
ಆಗಸ್ಟ್ 19ರಂದು ಬೆಳಿಗ್ಗೆ 11.00 ಗಂಟೆಗೆ ಉಡುಪಿ ಪುರಭವನದಲ್ಲಿ ಜನಾಶೀರ್ವಾದ ಯಾತ್ರೆ ಸಮಾವೇಶ ಹಾಗೂ ನೂತನ ಕೇಂದ್ರ ಸಚಿವರಿಗೆ ಅಭಿನಂದನಾ ಸಮಾರಂಭ ಸಂಪನ್ನಗೊಳ್ಳಲಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…