ಉಡುಪಿ : ಇಂದು ಉಡುಪಿ ಬಳಿ ಉಡುಪಿ-ಕುಂದಾಪುರ ರಸ್ತೆಯಲ್ಲಿ ಆಟೋ ಪಲ್ಟಿಯಾಗಿ ಗಾಯಗೊಂಡ ಮಹಿಳೆಯನ್ನು ಆರೋಗ್ಯ ಸಚಿವ ಬಿ.ಶ್ರೀರಾಮಲು ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಉಡುಪಿ ಕುಂದಾಪುರ ರಸ್ತೆಯಲ್ಲಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೋಗುತ್ತಿದ್ದಾಗ ಆಟೋ ಪಲ್ಟಿಯಾಗಿ ಮಹಿಳೆಯೊಬ್ಬರು ಗಾಯಗೊಂಡು ಬಿದ್ದಿದ್ದರು. ಕೂಡಲೇ ಅವರಿಗೆ ಸ್ಥಳದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಇನ್ನು ಘಟನೆ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಶ್ರೀರಾಮುಲು, ಅಪಘಾತ ಸಂಭವಿಸಿದಾಗ ನೂರಾರು ಮಂದಿ ಸೇರುತ್ತಾರೆ. ನೂರಾರು ಮಂದಿ ಸೇರಿದ್ದರೂ ಆಂಬುಲೆನ್ಸ್ ಗೆ ಕರೆ ಮಾಡಿ ಅದು ಬರುವವರೆಗೆ ಕಾಯುತ್ತಾರೆ. ಆದರೆ, ಮಾನವನ ಜೀವ ಅಮೂಲ್ಯ. ಸಮೀಪದಲ್ಲೇ ಆಸ್ಪತ್ರೆ ಇದ್ದರೆ ಆಂಬುಲೆನ್ಸ್ ಬರುವವರೆಗೆ ಕಾಯದೆ ಅಲ್ಲಿದ್ದ ವಾಹದಲ್ಲಿ ಗಾಯಾಳುಗಳನ್ನು ಸಾಗಿಸುವುದು ಮಾನವೀಯತೆ. ಇದನ್ನು ಎಲ್ಲರೂ ರೂಢಿಸಿಕೊಂಡರೆ ಸಾವಿರಾರು ಪ್ರಾಣಗಳನ್ನು ಕಾಪಾಡಬಹುದು ಎಂದು ಬರೆದುಕೊಂಡಿದ್ದಾರೆ.
ಈ ಸಂದರ್ಭ ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಾಯಗಳಾಯಿತು. ಇದೇ ವೇಳೆ ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಶಾಸಕ ರಘುಪತಿ ಭಟ್ ಸಚಿವ ಶ್ರೀರಾಮುಲು ಅಪಘಾತ ಗಮನಿಸಿ ಸ್ಥಳಕ್ಕೆ ಧಾವಿಸಿ ಬಂದರು. ಮಾತ್ರವಲ್ಲದೆ ಗಾಯಾಳುಗಳಿಗೆ ನೀರು ಕುಡಿಸಿ ಸಮಾಧಾನಿಸಿ ಗಾಯಾಳುಗಳನ್ನು ತಾನೇ ಎತ್ತಿ ಕಾರಿನಲ್ಲಿ ಕೂರಿಸಿದ ಆರೋಗ್ಯ ಸಚಿವರು ಬಳಿಕ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…