ಉಡುಪಿ :ಉಡುಪಿ ತಾಲೂಕು ವಲಯ-01 ರ ಪರವಾನಿಗೆ ಹೊಂದಿರುವ ಆಟೋ ರಿಕ್ಷಾಗಳು ನಗರದ ಯಾವುದೇ ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆ ಮಾಡಬಹುದಾಗಿದೆ.
ಆದರೆ ಕೆಲವು ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡದೇ ದಬ್ಬಾಳಿಕೆ ಮಾಡುತ್ತಿರುವುದಾಗಿ ಸಾಕಷ್ಟು ದೂರುಗಳು ಪ್ರಾಧಿಕಾರಕ್ಕೆ ಬಂದಿದ್ದು, ಉಡುಪಿ ತಾಲೂಕು ವಲಯ-01 ರ ಪರವಾನಿಗೆ ಹೊಂದಿರುವ ಆಟೋ ರಿಕ್ಷಾಗಳನ್ನು ನಗರದ ಯಾವುದೇ ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆ ಮಾಡಲು ತೊಂದರೆ ನೀಡಬಾರದು ಮತ್ತು ಈಗಾಗಲೇ ಜಾರಿಯಲ್ಲಿರುವಂತೆ ಎಲ್ಲಾ ಆಟೋ ರಿಕ್ಷಾಗಳಿಗೆ ಕಲರ್ ಕೋಡಿಂಗ್ ವಲಯ ಸ್ಟಿಕರ್ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಂಡು ಸಂಚರಿಸಲು ಎಲ್ಲಾ ಆಟೋರಿಕ್ಷಾ ಚಾಲಕರು ಕ್ರಮವಹಿಸಬೇಕು. ತಪ್ಪಿದಲ್ಲಿ ಅಂತಹವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…