ಉಡುಪಿ: ಆನೆಗುಡ್ಡೆ ಶ್ರೀ ವಿನಾಯಕ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಯಡಿಯೂರಪ್ಪ -Vishwanews24
ಉಡುಪಿ: ಆನೆಗುಡ್ಡೆ ಶ್ರೀ ವಿನಾಯಕ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಯಡಿಯೂರಪ್ಪ -Vishwanews24
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಎರಡು ದಿನಗಳ ಪ್ರವಾಸದಲ್ಲಿದ್ದ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಇದೀಗ ಆನೆಗುಡ್ಡೆ ಶ್ರೀ ವಿನಾಯಕ ದೇವರ ದರ್ಶನ ಪಡೆದಿದ್ದು,ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಆನೆಗುಡ್ಡೆ ವಿನಾಯಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ,ರಾಜ್ಯದ ಜನರಿಗೆ ಶ್ರೇಯಸ್ಸುಗುವಂತೆ ದೇವರಲ್ಲಿ ಪ್ರಾರ್ಥಿಸಿದರೆ, ಕರೋನಾ ಸಾಂಕ್ರಾಮಿಕ ರೋಗದಿಂದ ಜನರು ಶಾಂತಿ ನೆಮ್ಮದಿ ಕಾಣಲಿ ಎಂದು ವಿನಾಯಕನ ಮೊರೆಹೋಗಿದ್ದಾರೆ ಮುಖ್ಯಮಂತ್ರಿ ಯಡಿಯೂರಪ್ಪ,ಹಾಗೂ ಕಾರ್ಯಕ್ರಮದಲ್ಲಿ ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಲ್ಲಡ್ಕ ಪ್ರಭಾಕರ ಭಟ್ ಶಾಸಕ ಸುಕುಮಾರ್ ಶೆಟ್ಟಿ ಮೊದಲಾದವರು ಭಾಗಿಯಾಗಿದ್ದಾರೆ.
